×
Ad

ಔರಂಗಜೇಬ್ ಕುರಿತ ಹೇಳಿಕೆ: ಮಹಾರಾಷ್ಟ್ರ ವಿಧಾನಸಭೆಯಿಂದ ಶಾಸಕ ಅಬೂ ಆಸಿಂ ಅಝ್ಮಿ ಅಮಾನತು

Update: 2025-03-05 14:17 IST

ಎಸ್ಪಿ ಶಾಸಕ ಅಬೂ ಆಸಿಂ ಅಝ್ಮಿ (PTI)

ಮುಂಬೈ: ಮೊಘಲ್‌ ದೊರೆ ಔರಂಗಜೇಬ್ ಕುರಿತು ಸಮಾಜವಾದಿ ಪಕ್ಷದ ಶಾಸಕ ಅಬೂ ಆಸಿಂ ಅಝ್ಮಿ ನೀಡಿದ್ದ ಹೇಳಿಕೆ ವಿವಾದ ಸೃಷ್ಟಿಸಿದ್ದು, ಮಹಾರಾಷ್ಟ್ರ ವಿಧಾನಸಭೆಯಿಂದ ಅವರನ್ನು ಬುಧವಾರ ಅಮಾನತು ಮಾಡಲಾಗಿದೆ.

ರಾಜ್ಯ ಸಚಿವ ಚಂದ್ರಕಾಂತ್ ಪಾಟೀಲ್ ಸದನದಲ್ಲಿ ಅಮಾನತುಗೊಳಿಸುವ ಪ್ರಸ್ತಾಪವನ್ನು ಮಂಡಿಸಿದ ಬಳಿಕ ಮತದಾನದ ಮೂಲಕ ಅಮಾನತನ್ನು ಘೋಷಿಸಲಾಯಿತು.

ಪ್ರಸಕ್ತ ನಡೆಯುತ್ತಿರುವ ಬಜೆಟ್‌ ಅಧಿವೇಶನ ಮುಗಿಯುವವರೆಗೆ ಅಝ್ಮಿಯವರನ್ನು ಅಮಾನತು ಮಾಡಲಾಗಿದೆ. ಮಾರ್ಚ್‌ 26ರವರೆಗೆ ಬಜೆಟ್‌ ಅಧಿವೇಶನ ನಡೆಯಲಿದೆ.

ಮಹಾರಾಷ್ಟ್ರದಲ್ಲಿ ಸಮಾಜವಾದಿ ಪಕ್ಷದ ಅಧ್ಯಕ್ಷರಾಗಿರುವ ಅಬೂ ಆಸಿಂ ಅಝ್ಮಿ ಅವರು, ‘ಔರಂಗಜೇಬ್ ಆಡಳಿತದಲ್ಲಿ ಭಾರತದ ಗಡಿಯು ಅಫ್ಘಾನಿಸ್ತಾನ ಮತ್ತು ಮ್ಯಾನ್ಮಾರ್ ವರೆಗೂ ವಿಸ್ತರಿಸಿತ್ತು. ನಮ್ಮ ಜಿಡಿಪಿಯು ವಿಶ್ವದ ಜಿಡಿಪಿಯ ಶೇ 24ರಷ್ಟಿತ್ತು. ಭಾರತವನ್ನು ಚಿನ್ನದ ಗುಬ್ಬಚ್ಚಿ ಎಂದು ಕರೆಯಲಾಗುತ್ತಿತ್ತು’ ಎಂದು ಹೇಳಿದ್ದರು.

ಔರಂಗಜೇಬ್ ಮತ್ತು ಛತ್ರಪತಿ ಸಂಭಾಜಿ ಮಹಾರಾಜ ನಡುವಿನ ಯುದ್ಧದ ಕುರಿತ ಪ್ರಶ್ನೆಗೆ, ಅದೊಂದು ರಾಜಕೀಯ ಕದನವಾಗಿತ್ತು ಎಂದು ಪ್ರತಿಕ್ರಿಯಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News