ತಮಿಳುನಾಡು ಮಾಜಿ ಸಚಿವ ಸೆಂಥಿಲ್ ಬಾಲಾಜಿಗೆ ‘ಸುಪ್ರೀಂ’ ಜಾಮೀನು
Update: 2024-09-26 11:58 IST
Photo: PTI
ಹೊಸದಿಲ್ಲಿ: ಉದ್ಯೋಗಕ್ಕಾಗಿ ನಗದು ಹಗರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಮಿಳುನಾಡು ಮಾಜಿ ಸಚಿವ ವಿ.ಸೆಂಥಿಲ್ ಬಾಲಾಜಿಗೆ ಗುರುವಾರ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಎಐಎಡಿಎಂಕೆ ಸರಕಾರವಿದ್ದಾಗ ಸಾರಿಗೆ ಸಚಿವರಾಗಿದ್ದ ವಿ.ಸೆಂಥಿಲ್ ಬಾಲಾಜಿ ಉದ್ಯೋಗಕ್ಕಾಗಿ ನಗದು ಹಗರಣದಲ್ಲಿ ಭಾಗಿಯಾಗಿದ್ದರು ಎಂಬ ಆರೋಪದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿಕೊಂಡಿದ್ದ ಜಾರಿ ನಿರ್ದೇಶನಾಲಯ, ಜೂನ್ 24, 2023ರಲ್ಲಿ ಅವರನ್ನು ಬಂಧಿಸಿತ್ತು.