×
Ad

ತನ್ನ ಕುಟುಂಬದ ಎಂಟು ಸದಸ್ಯರನ್ನು ಹತ್ಯೆಗೈದು ನಂತರ ಆತ್ಮಹತ್ಯೆ ಮಾಡಿಕೊಂಡ ಆರೋಪಿ

Update: 2024-05-29 13:52 IST

ಸಾಂದರ್ಭಿಕ ಚಿತ್ರ

ಚಿಂಚ್ವಾಡ (ಮಧ್ಯಪ್ರದೇಶ): ತನ್ನ ಅವಿಭಜಿತ ಕುಟುಂಬದ ಎಂಟು ಮಂದಿಯನ್ನು ಕೊಡಲಿಯಿಂದ ಹತ್ಯೆಗೈದಿರುವ ವ್ಯಕ್ತಿಯೊಬ್ಬ, ನಂತರ ತಾನೂ ನೇಣು ಬಿಗಿದುಕೊಂಡು ಮೃತಪಟ್ಟಿರುವ ಘಟನೆ ಮಂಗಳವಾರ ರಾತ್ರಿ ಮಧ್ಯಪ್ರದೇಶದ ಚಿಂಚ್ವಾಡ ಜಿಲ್ಲೆಯಲ್ಲಿ ನಡೆದಿದೆ.

ಈ ಘಟನೆಯು ಮಂಗಳವಾರ ರಾತ್ರಿ ಬೋದಲ್ ಕಚ್ಚರ್ ಗ್ರಾಮದಲ್ಲಿ ನಡೆದಿದೆ ಎಂದು ಮಹುಲ್ ಝಿರಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದು, ಘಟನೆಯ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ ಎನ್ನಲಾಗಿದೆ.

ಚಿಂಚ್ವಾಡ ಜಿಲ್ಲಾ ಕೇಂದ್ರದಿಂದ ಸುಮಾರು 100 ಕಿಮೀ ದೂರವಿರುವ ಘಟನಾ ಸ್ಥಳಕ್ಕೆ ಚಿಂಚ್ವಾಡ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ದೌಡಾಯಿಸಿದ್ದಾರೆ.

ಘಟನೆಯ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News