ಜ.8ರಂದು ಉಚಿತ ನೇತ್ರ ಶಿಬಿರ
Update: 2016-01-02 06:34 GMT
ಮೂಡುಬಿದಿರೆ: ಸಮಾಜ ಸೇವೆಗೆ ಮುನ್ನುಡಿ ಬರೆದ ಗ್ರಾಮೀಣ ಭಾಗದ ಜನಸಾಮಾನ್ಯರ ಪಾಲಿಗೆ ಆಶಾಕಿರಣವೆನಿಸಿದ ಕಿನ್ನಿಗೋಳಿಯ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆ ನೇತೃತ್ವದಲ್ಲಿ ಮಂಗಳೂರು ವೆನ್ ಲಾಕ್ ಅಸ್ವತ್ರೆಯ ಸಂಚಾರ ನೇತ್ರ ಘಟಕ, ಮಂಗಳೂರಿನ ಜಿಲ್ಲಾ ಆಂಧತ್ವ ನಿವರಣ ಸಂಸ್ಥೆ ಹಾಗೂ ಮುಚ್ಚೂರು ನೀರುಡೆ ಲಯನ್ಸ್ ಸಂಸ್ಥೆಗಳ ಸಹಯೋಗದಲ್ಲಿ ಉಚಿತ ನೇತ್ರ ಚಿಕಿತ್ಸಾ ಶಿಬಿರ ಜನವರಿ 8ರಂದು ಮೂಡಬಿದಿರೆ ಸಮಾಜ ಮಂದಿರದಲ್ಲಿ ಬೆಳ್ಳಿಗ್ಗೆ 9.30ರಿಂದ 12.30 ವರಗೆ ನಡೆಯಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಚಾವಡಿ ಮನೆ ಜಗನ್ನಾಥ ಶೆಟ್ಟಿ ಮೂಡಬಿದಿರೆ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.