ಮೂಡಿಗೆರೆ: ಉಚಿತ ಆರೋಗ್ಯ ಶಿಬಿರ

Update: 2016-01-02 17:39 GMT

ಮಂಗಳೂರು, ಜ.2: ಕಣಚೂರು ಆಸ್ಪತ್ರೆಯು ರಾಜ್ಯದ ವಿವಿಧೆೆಡೆ ಸಂಸ್ಥೆಗಳ ನೆರವಿನೊಂದಿಗೆ ಜನರ ಆರೋಗ್ಯ ತಪಾಸಣೆ ನಡೆಸುವ ಚಟುವಟಿಕೆಗಳನ್ನು ನಡೆಸುತ್ತಿದೆ. ವಿವಿಧ ಯೋಜನೆಗಳ ಅಡಿಯಲ್ಲಿ ಉಚಿತ ಚಿಕಿತ್ಸೆಗೂ ಆಸ್ಪತ್ರೆಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ದೇರಳಕಟ್ಟೆಯ ಕಣಚೂರು ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಅಧ್ಯಕ್ಷ ಕಣಚೂರು ಮೋನು ಹೇಳಿದರು.
ದೇರಳಕಟ್ಟೆಯ ಕಣಚೂರು ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರ ಹಾಗೂ ಗೋಣಿಬೀಡು ರೋಟರಿ ಸಂಸ್ಥೆಯ ಆಶ್ರಯದಲ್ಲಿ ಇತ್ತೀಚೆಗೆ ಮೂಡಿಗೆರೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜಿಪಂ ಸದಸ್ಯ ವಿ.ಕೆ. ಶಿವೇಗೌಡ, ರೋಟರಿ ಸಂಸ್ಥೆಯ ಅಧ್ಯಕ್ಷ ಯು.ಇ.ಪ್ರಕಾಶ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಕಣಚೂರು ಮೋನು ಅವರನ್ನು ಸನ್ಮಾನಿಸಲಾಯಿತು. ರೋಟರಿ ಸಂಸ್ಥೆಯ ಪದಾಧಿಕಾರಿಗಳಾದ ಅನೀಸ್, ಕೆ.ಟಿ. ಜಗದೀಶ್, ಜಿತೇಂದ್ರ ಚಿನ್ನಿಗಾ, ನವೀನ್, ಯು.ಎನ್. ಚಂದ್ರೇಗೌಡ ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News