ನಾಲ್ಕನೆ ಸುತ್ತಿನ ಇಂದ್ರಧನುಷ್ ಅಭಿಯಾನಕ್ಕೆ ಚಾಲನೆ

Update: 2016-01-04 09:29 GMT

ಮಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಗರ್ಭಿಣಿ ಹಾಗೂ 2 ವರ್ಷದೊಳಗಿನ ಮಕ್ಕಳಿಗೆ ನೀಡುವ ನಾಲ್ಕನೆ ಸುತ್ತಿನ ಇಂದ್ರಧನುಷ್ ಲಸಿಕೆ ಕಾರ್ಯಕ್ರಮಕ್ಕೆ ಇಂದು ಲೇಡಿಗೋಶನ್ ಆಸ್ಪತ್ರೆಯಲ್ಲಿ ಚಾಲನೆ ನೀಡಲಾಯಿತು.

ಶಾಸಕ ಜೆ.ಆರ್. ಲೋಬೋ ಮಕ್ಕಳಿಗೆ ಲಸಿಕಾ ಹನಿ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಐ. ಶ್ರೀವಿದ್ಯಾ, ಡಾ. ಸಿಕಂದರ್ ಪಾಷಾ ಮೊದಲಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮ ಜ. 12ರವರೆಗೆ (ಜ.7 ಮತ್ತು 10 ಹೊರತುಪಡಿಸಿ) ನಡೆಯಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News