ಪೊಲೀಸರ ವಿರುದ್ಧ ಶಿಸ್ತುಕ್ರಮಕ್ಕೆ ಶಿಫಾರಸು
Update: 2016-01-05 18:44 GMT
ಕಾಸರಗೋಡು, ಜ.5: ಲಾಕಪ್ ದೌರ್ಜನ್ಯಕ್ಕೆ ಸಂಬಂಧಪಟ್ಟಂತೆ ಲಭಿಸಿದ ದೂರಿನ ಹಿನ್ನೆಲೆಯಲ್ಲಿ ಚಿತ್ತಾರಿಕಾಲ್ನ ಎಸ್ಸೈ ಸೇರಿದಂತೆ ಮೂವರು ಪೊಲೀಸರ ಮೇಲೆ ಶಿಸ್ತು ಕ್ರಮಕ್ಕೆ ಜಿಲ್ಲಾ ಪೊಲೀಸ್ ದೂರು ಪರಿಹಾರ ಪ್ರಾಧಿಕಾರ ಶಿಫಾರಸು ಮಾಡಿದೆ.
ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಅಹವಾಲು ಸ್ವೀಕಾರ ಸಂದರ್ಭದಲ್ಲಿ ಚಿತ್ತಾರಿಕಾಲ್ನ ಜೇಮ್ಸ್ ನೀಡಿದ ದೂರಿನಂತೆ ಈ ಶಿಫಾರಸು ಮಾಡಲಾಗಿದೆ. ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರ ಅಧ್ಯಕ್ಷ ಕೆ.ವಿ. ಗೋಪಿಕುಟ್ಟನ್, ಜಿಲ್ಲಾ ಪೊಲೀಸ್ ಮುಖ್ಯಸ್ಥ ಎ. ಶ್ರೀನಿವಾಸ್, ಕೆ.ಜಯಲಕ್ಷ್ಮೀ ಮೊದಲಾದವರು ಉಪಸ್ಥಿತರಿದ್ದರು.