×
Ad

ಬಾವಿಗೆ ಬಿದ್ದು ಕೂಲಿ ಕಾರ್ಮಿಕ ಮೃತ್ಯು

Update: 2016-01-09 00:08 IST

ಕಾಸರಗೋಡು, ಜ.8: ಬಾವಿಗೆ ಬಿದ್ದು ಕೂಲಿ ಕಾರ್ಮಿಕರೋರ್ವರು ಮೃತಪಟ್ಟ ಘಟನೆ ಪೆರ್ಲ ಬಳಿಯ ಬೆಂಗಪದವು ಎಂಬಲ್ಲಿ ನಡೆದಿದೆ. ಮೃತರನ್ನು ಪೆಲ್ತಾಜೆಯ ಪದ್ಮನಾಭ ನಾಯ್ಕಾ ( 30) ಎಂದು ಗುರುತಿಸಲಾಗಿದೆ.

ಗುರುವಾರ ರಾತ್ರಿಯಿಂದ ಇವರು ನಾಪತ್ತೆಯಾಗಿದ್ದರು. ಕೆಲಸಕ್ಕೆ ತೆರಳಿದ್ದ ಇವರು ಮನೆಗೆ ಮರಳುತ್ತಿದ್ದಾಗ ದಾರಿ ನಡುವಿನ ಆವರಣವಿಲ್ಲದ ಬಾವಿಗೆ ಬಿದ್ದು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹವನ್ನು ಮೇಲಕ್ಕೆತ್ತಿದರು. ಬದಿಯಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News