×
Ad

ಉಡುಪಿಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ

Update: 2016-01-26 19:48 IST

ಉಡುಪಿ,ಜ.26: ಉಡುಪಿ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮ ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನ, ಶಾಲಾ-ಕಾಲೇಜು ಮಕ್ಕಳ ವರ್ಣರಂಜಿತ ಹಾಡು-ಕುಣಿತಗಳ ಮಧ್ಯೆ ಇಂದು ಇದೇ ಮೊದಲ ಬಾರಿಗೆ ಬೀಡಿನಗುಡ್ಡೆಯ ನೂತನ ಬಯಲು ರಂಗಮಂದಿರದ ಆವರಣದಲ್ಲಿ ಸಂಭ್ರಮದಿಂದ ನಡೆಯಿತು.


ರಾಜ್ಯ ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ್ ಸೊರಕೆ ಅವರು ಧ್ವಜಾರೋಹಣವನ್ನು ನೆರವೇರಿಸಿ, ಗೌರವರಕ್ಷೆ ಸ್ವೀಕರಿಸಿ , ಗಣರಾಜ್ಯೋತ್ಸವ ಸಂದೇಶ ನೀಡಿದರು. ಸಂವಿಧಾನದ ಪೂರ್ವ ಪೀಠಿಕೆಯಲ್ಲಿ ಹೇಳಿರುವ ಎಲ್ಲಾ ತತ್ವ, ಸಿದ್ಧಾಂತಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಮೂಲಕ ಎಲ್ಲರ ಬಾಳಿನಲ್ಲಿ ನೆಮ್ಮದಿ ತರುವುದು ಪ್ರತಿಯೊಬ್ಬ ಭಾರತೀಯನ ಚಿಂತನೆಯಾಗಬೇಕು ಎಂದವರು ಹೇಳಿದರು.

   ಈಸಂದರ್ಭದಲ್ಲಿ ಮುಖ್ಯಮಂತ್ರಿಗಳ ಚಿನ್ನದ ಪದಕ ಪಡೆದ ಗೃಹರಕ್ಷಕ ದಳದ ಜಿಲ್ಲಾ ಕಮಾಂಡೆಂಟ್ ಡಾ. ಕೆ. ಪ್ರಶಾಂತ್ ಶೆಟ್ಟಿ ಇವರನ್ನು ಸನ್ಮಾನಿಸಲಾಯಿತು. ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳನ್ನು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಜಿಲ್ಲಾ ಮಟ್ಟದಲ್ಲಿ ಕಲೆ, ಕ್ರೀಡೆ, ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆ ತೋರಿದ ಮಕ್ಕಳಿಗೆ ತಲಾ 10,000ರೂ.ಗಳ ನಗದು ಮತ್ತು ಪ್ರಮಾಣ ಪತ್ರ ವಿತರಿಸಲಾಯಿತು.


 ಅತ್ಯುತ್ತಮ ಪಥ ಸಂಚಲನಕ್ಕಾಗಿ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಸೈಂಟ್ ಸಿಸಿಲಿ ಆಂಗ್ಲ ಮಾಧ್ಯಮ ಶಾಲೆ, ವಳಕಾಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಮಲ್ಪೆಯ ಪ್ಲವರ್ ಅಪ್ ಪ್ಯಾರಡೈಸ್ ಶಾಲೆಗಳು ಅನುಕ್ರಮವಾಗಿ ಮೊದಲ ಮೂರು ಬಹುಮಾನಗಳನ್ನು ಜಯಿಸಿದವು.

 ಪ್ರೌಢಶಾಲಾ ವಿಭಾಗದಲ್ಲಿ ಸೈಂಟ್ ಸಿಸಿಲಿ ಫ್ರೌಢ ಶಾಲೆ, ಯು.ಕಮಲಾ ಬಾಯಿ ಪ್ರೌಢಶಾಲೆ, ಬಾರಕೂರು ಹೇರಾಡಿಯ ವಿದ್ಯೇಶ ವಿದ್ಯಾಮಾನ್ಯ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗಳು ಮೊದಲ ಮೂರು ಸ್ಥಾನಗಳನ್ನು ಜಯಿಸಿದವು. ಪ್ರೌಢಶಾಲಾ ವಿಭಾಗದಲ್ಲಿ ಸೈಂಟ್‌ಸಿಸಿಲಿಫ್ರೌಢಶಾಲೆ,ಯು.ಕಮಲಾಬಾಯಿ ಪ್ರೌಢಶಾಲೆ,ಬಾರಕೂರುಹೇರಾಡಿಯವಿದ್ಯೇಶವಿದ್ಯಾಮಾನ್ಯಆಂಗ್ಲಮ್ಯಾಮ ಪ್ರೌಢ ಶಾಲೆಗಳು ಮೊದಲ ಮೂರು ಸ್ಥಾನಗಳನ್ನು ಜಯಿಸಿದವು. ಕಾಲೇಜು ವಿಭಾಗದಲ್ಲಿ ಎಂಜಿಎಂ ಕಾಲೇಜಿನ ಎನ್‌ಸಿಸಿ ಆರ್ಮಿ ಪ್ರಥಮ, ಎಂಜಿಎಂ ಕಾಲೇಜಿನ ಎನ್‌ಸಿಸಿ ನೇವಿ ದ್ವಿತೀಯ ಹಾಗೂ ಉಡುಪಿ ಅಜ್ಜರಕಾಡಿನ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿಗೆ ತೃತೀಯ ಬಹುಮಾನ ವಿತರಿಸಲಾಯಿತು.


ಕೊನೆಯಲ್ಲಿ ನಗರದ ಆಸುಪಾಸಿನ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ದೇಶಭಕ್ತಿಯನ್ನು ಸಾರುವ ಹಾಡು-ನೃತ್ಯಗಳು ವರ್ಣರಂಜಿತವಾಗಿ ಮೂಡಿ ಬಂದವು. ಮುಕುಂದಕೃಪಾ ಆಂಗ್ಲ ಮಾಧ್ಯಮ ಶಾಲೆ, ಸೈಂಟ್ ಸಿಸಿಲಿ ಆಂಗ್ಲ ಮಾಧ್ಯಮ ಶಾಲೆ, ಉದ್ಯಾವರದ ಸೈಂಟ್ ಫ್ರಾನ್ಸಿಸ್ ಕ್ಸೇವಿಯರ್ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪೂರ್ಣಪ್ರಜ್ಞ ಪದವಿ ಕಾಲೇಜಿನ ವಿದ್ಯಾರ್ಥಿಗಳು ಈ ಪ್ರದರ್ಶನ ನೀಡಿದರು.
 ಕಾರ್ಯಕ್ರಮದಲ್ಲಿ ಶಾಸಕ ಪ್ರಮೋದ್ ಮಧ್ವರಾಜ್, ನಗರಸಭೆ ಅಧ್ಯಕ್ಷ ಪಿ. ಯುವರಾಜ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜನಾರ್ದನ ತೋನ್ಸೆ, ತಾಪಂ ಅಧ್ಯಕ್ಷ ಸುನೀತಾ ನಾಯ್ಕೆ, ಜಿಲ್ಲಾಧಿಕಾರಿ ವಿಶಾಲ್ ಆರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಅಣ್ಣಾಮಲೈ, ಜಿಪಂ ಸಿಇಓ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಅಪರ ಜಿಲ್ಲಾಧಿಕಾರಿ ಚೆನ್ನಬಸಪ್ಪಉಪಸ್ಥಿತರಿದ್ದರು. ಕಾರ್ಯಕ್ರಮದ ಆರಂದಲ್ಲಿ ಬಿ.ಕೃಷ್ಣ ಕಾರಂತ್ ಮತುತಿ ಬಳಗ ಇವರಿಂದ ದೇಶಕಿತಿ ಗೀತೆ ಹಾಗೂ ಸಮೂಹ ಸಂಗೀತ ಕಾರ್ಯಕ್ರಮ ನಡೆಯಿತು.


ಇದೇ ಸಂದರ್ದಲ್ಲಿ ನೂತನ ಬಯಲು ರಂಗಮಂದಿರವನ್ನು ಜಿಲ್ಲಾ ಉಸುತಿವಾರಿ ಸಚಿವ ವಿನಯ ಕುಮಾರ್ ಸೊರಕೆ ರವರು ಉದ್ಘಾಟಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News