ಉಮನಗುಡ್ಡೆ: ಕಾಂಕ್ರಿಟ್ ರಸ್ತೆ ಉದ್ಘಾಟನೆ
Update: 2016-01-26 23:44 IST
ಬಂಟ್ವಾಳ, ಜ.26: ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ನಿರ್ಮಾಣಗೊಂಡ ಬ್ರಹ್ಮರಕೂಟ್ಲುವಿನ ದರಿಬಾಗಿಲು-ಉಮನಗುಡ್ಡೆ ನೂತನ ಕಾಂಕ್ರಿಟ್ ರಸ್ತೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಳ್ಳಿಗೆ ಗ್ರಾಪಂ ಅಧ್ಯಕ್ಷೆ ರತ್ನಾ, ಜಿಪಂ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಮಮತಾ ಗಟ್ಟಿ, ಭೂನ್ಯಾಯ ಮಂಡಳಿ ಸದಸ್ಯ ದಿವಾಕರ ಪಂಬದಬೆಟ್ಟು, ಪುರಸಭಾ ಸದಸ್ಯರಾದ ರಾಮಕೃಷ್ಣ ಆಳ್ವ, ಜಗದೀಶ್ ಕುಂದರ್, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಅಬ್ಬಾಸ್ ಅಲಿ ಮತ್ತಿತರರು ಉಪಸ್ಥಿತರಿದ್ದರು.