ಹೂಡಿಕೆ ಸಮಾವೇಶ ವಿರೋಧಿಸಿ ರೈತರ ಪ್ರತಿಭಟನೆ: ಬಂಧನ

Update: 2016-02-04 18:03 GMT

ಬೆಂಗಳೂರು, ಫೆ.4: ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ವಿರೋಧಿಸಿ ಗಾಂಧಿ ನಗರದಿಂದ ಅರಮನೆ ಮೈದಾನದತ್ತ ಮೆರವಣಿಗೆ ನಡೆಸುತ್ತಿದ್ದ ರಾಜ್ಯ ರೈತ ಸಂಘದ ಕಾರ್ಯಕರ್ತರನ್ನು ಪೊಲೀಸರು ತಡೆದು ಬಂಧಿಸಿದರು.
ಬಂಧನದ ವೇಳೆ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ, ಬಂಡವಾಳ ಹೂಡಿಕೆದಾರರ ಸಮಾವೇಶದಿಂದ ರಾಜ್ಯದ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಯಾಗುವುದಿಲ್ಲ. ಇದು ತೆರಿಗೆ ಹಣವನ್ನು ಪೋಲು ಮಾಡುವ ಕೆಲಸವಷ್ಟೇ ಎಂದು ಆರೋಪಿಸಿದರು.
ರಾಜ್ಯದ ಜನರ ತೆರಿಗೆ, ಭೂಮಿ, ಜಲ ಮಾತ್ರ ಬಂಡವಾಳಿಗರಿಗೆ ಕೊಡುವ ಸರಕಾರ ರೈತರಿಗೆ ಏನು ಕೊಟ್ಟಿದೆ. ಕಳೆದ ವರ್ಷದಿಂದ ರಾಜ್ಯದಲ್ಲಿ ಸಾವಿರಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸಕಾರಾತ್ಮಕವಾದ ಯಾವ ತೀರ್ಮಾನ ಕೈಗೊಳ್ಳದ, ಬಡಜನತೆಯ ಬಗ್ಗೆ ಯಾವ ಕ್ರಮವನ್ನು ಕೈಗೊಳ್ಳದ ಸರಕಾರ ಶ್ರೀಮಂತರಿಗೆ ರತ್ನಗಂಬಳಿ ಹಾಸುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News