ಮಂಗಳೂರು : ಗಾಂಜ ಸೇವನೆ, ಮೂವರ ಬಂಧನ
Update: 2016-02-08 22:20 IST
ಮಂಗಳೂರು, ಫೆ .8: ನಗರದ ಆಕಾಶಭವನದಲ್ಲಿ ಗಾಂಜ ಸೇವನೆಗೈದು ಅನುಮಾನಸ್ಪದವಾಗಿ ತಿರುಗಾಡುತ್ತಿದ್ದ ಮೂವರನ್ನು ಕಾವೂರು ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಅಭಿಲಾಷ್(33), ನರೇಶ್(29), ಜಗದೀಶ್(30) ಎಂದು ಗುರುತಿಸಲಾಗಿದೆ. ಆರೋಪಿಗಳು ಗಾಂಜ ಸೇವನೆ ಮಾಡಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವೇಳೆ ಪೊಲೀಸರು ಬಂಧಿಸಿದ್ದಾರೆ. ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.