×
Ad

ಡಾ.ಜಿ.ಎನ್.ಭಟ್‌ಗೆ ಏರ್ಯ ಪ್ರಶಸ್ತಿ

Update: 2016-02-09 00:34 IST

   ಮಂಗಳೂರು, ಫೆ.8: ಕೆನರಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಹಾಗೂ ಶಿರಸಿಯ ಸಂಶೋಧನ ಸಂಸ್ಥೆಯ ಅಧ್ಯಕ್ಷ ಡಾ.ಜಿ.ಎನ್ ಭಟ್ ಬೆಂಗಳೂರು ಇವರಿಗೆ ಏರ್ಯ ಪ್ರಶಸ್ತಿಯನ್ನು ಫೆ.17ರಂದು ಪ್ರದಾನ ಮಾಡಲಾಗುವುದು. ಅಂದು ಸಂಜೆ ನಗರದ ಕೆನರಾ ಕಾಲೇಜಿನ ರತ್ನಾಬಾಯಿ ಸ್ಮಾರಕ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಅಧ್ಯಕ್ಷ ಸಿ.ಎ. ಎಸ್.ಎಸ್ ಕಾಮತ್ ವಹಿಸಲಿದ್ದಾರೆ. ಸಂತ ಅಲೋಶಿಯಸ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ.ಶಿಕಾರಿಪುರ ಕೃಷ್ಣಮೂರ್ತಿ ಅಭಿನಂದನಾ ಭಾಷಣ ಮಾಡಲಿದ್ದಾರೆ. ಸಾಹಿತಿ ಏರ್ಯ ಲಕ್ಷ್ಮೀನಾರಾಯಣ ಆಳ್ವ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News