ಸಾರ್ವಜನಿಕ ಶಾಂತಿಭಂಗ: ಇಬ್ಬರ ವಿರುದ್ಧ ಪ್ರಕರಣ ದಾಖಲು

Update: 2016-02-11 18:25 GMT

ಪುತ್ತೂರು, ಫೆ.11: ಸಾರ್ವಜನಿಕ ಶಾಂತಿಭಂಗವನ್ನುಂಟು ಮಾಡುತ್ತಿರುವ ಆರೋಪದಲ್ಲಿ ಇಬ್ಬರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  ಪುತ್ತೂರು ನಗರ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಸತ್ತಿಕಲ್ಲು ನಿವಾಸಿಗಳಾದ ಉಮರಬ್ಬ ಮತ್ತು ಮರಿಯಮ್ಮ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಜಾಗದ ವಿಚಾರಕ್ಕೆ ಸಂಬಂಧಿಸಿ ಇವರಿಬ್ಬರ ನಡುವೆ ನಡೆಯುತ್ತಿರುವ ಗಲಾಟೆಯಿಂದಾಗಿ ಸಾರ್ವಜನಿಕ ಶಾಂತಿಭಂಗ ಉಂಟಾಗುತ್ತಿದ್ದು, ಅವರ ವಿರುದ್ಧ ಸೆಕ್ಷನ್ 107ರ ಪ್ರಕಾರ ಪ್ರಕರಣ ದಾಖಲಾಗಿದೆ. ಗರಿಷ್ಠ ಅವಧಿಯ ತನಕ ಉತ್ತಮ ನಡತೆಯ ಬಗ್ಗೆ ಮುಚ್ಚಳಿಕೆಯನ್ನು ಬರೆಸಿಕೊಳ್ಳಲು ತಾಲೂಕು ದಂಡಾಧಿಕಾರಿಗಳಿಗೆ ವರದಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News