ಕುಂದಾಪುರ: ಅಗ್ನಿಶಾಮಕ ದಳದ ಪ್ರಾತ್ಯಕ್ಷಿಕೆ
Update: 2016-02-11 18:25 GMT
ಉಡುಪಿ, ಫೆ.11: ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನ ಯೂತ್ ರೆಡ್ಕ್ರಾಸ್, ಎನ್ಸಿಸಿ (ನೌಕಾ ಮತ್ತು ಭೂವಿಭಾಗ) ಹಾಗೂ ಭಾರತೀಯ ರೆಡ್ಕ್ರಾಸ್ ಸೊಸೈಟಿ ತಾಲೂಕು ಘಟಕ ಕುಂದಾಪುರ ಇವರ ಸಹಯೋಗದಲ್ಲಿ ಅಗ್ನಿಶಾಮಕ ದಳದ ಪ್ರಾತ್ಯಕ್ಷಿಕೆಯನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು. ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಭಾರತೀಯ ರೆಡ್ಕ್ರಾಸ್ ಸೊಸೈಟಿ ಕುಂದಾಪುರ ತಾಲೂಕು ಘಟಕ ಸಭಾಪತಿ ಜಯಕರ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಯೂತ್ ರೆಡ್ಕ್ರಾಸ್ ಘಟಕದ ಪ್ರೊ. ಸತ್ಯನಾರಾಯಣ, ವಿದ್ಯಾರಾಣಿ, ಎನ್ಸಿಸಿ ಭೂದಳದ ಅಧಿಕಾರಿ ಲೆಫ್ಟಿನೆಂಟ್ ಅಂಜನ್ ಕುಮಾರ್ ಎ.ಎಲ್. ಮತ್ತು ಎನ್ಸಿಸಿ ನೌಕಾದಳದ ಅಧಿಕಾರಿ ಶರಣ್ ಎಸ್.ಜೆ, ಭಾರತೀಯ ರೆಡ್ಕ್ರಾಸ್ ಸೊಸೈಟಿ ತಾಲೂಕು ಘಟಕದ ಕಾರ್ಯದರ್ಶಿ ವೈ. ಸೀತಾರಾಮ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ, ರೆಡ್ಕ್ರಾಸ್ ಸಂಯೋಜಕ ಆವರ್ಸೆ ಮುತ್ತಯ್ಯ ಶೆಟ್ಟಿ ಉಪಸ್ಥಿತರಿದ್ದರು.