ರಾಷ್ಟ್ರೀಯ ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2016-02-17 18:11 GMT

ಬೆಂಗಳೂರು, ಫೆ. 17: ಭಾರತ ಸರ ಕಾರದ ವತಿಯಿಂದ ಸಾಹಸ ಕ್ರೀಡಾ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆಗೈದ ಸಾಹಸ ಕ್ರೀಡಾಪಟುಗಳಿಗೆ ತೇನ್‌ಸಿಂಗ್ ನೋರ್ಗೆ ರಾಷ್ಟ್ರೀಯ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು 2013, 2014 ಮತ್ತು 2015ನೆ ಸಾಲಿನಲ್ಲಿ ಸಾಹಸ ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ಸಾಧನೆಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಭೂ, ಜಲ ಮತ್ತು ವಾಯು ಸಾಹಸ ಕ್ಷೇತ್ರದಲ್ಲಿ ಮಹತ್ತರ ಸಾಧನೆಗೆ ತಲಾ ಒಂದೊಂದು ಪ್ರಶಸ್ತಿ ನೀಡಲಾಗುತ್ತದೆ.
 ಅರ್ಜಿ ಸಲ್ಲಿಸುವ ವಿಕಲಚೇತನರು ಅಂಗವಿಕಲತೆ ಬಗ್ಗೆ ಸಕ್ಷಮ ಪ್ರಾಧಿ ಕಾರದಿಂದ ಪಡೆದ ಪ್ರಮಾಣ ಪತ್ರವನ್ನು ಸಲ್ಲಿಸಲು ಕೋರಿದೆ. ಆಸಕ್ತರು ಅರ್ಜಿಗಳನ್ನು ಫೆ.29ರೊಳಗೆ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡಮಿ, ಮಹಾನಿರ್ದೇಶಕರ ಕಚೇರಿ, ಮೂರನೆ ಮಹಡಿ, ರಾಜ್ಯ ಯುವ ಕೇಂದ್ರ, ನೃಪತುಂಗ ರಸ್ತೆ, ಬೆಂಗಳೂರು- 560 001ವಿಳಾಸಕ್ಕೆ ಸಲ್ಲಿಸಲು ಕೋರಿದೆ.
ಹೆಚ್ಚಿನ ಮಾಹಿತಿಗಾಗಿ www.gethnaa.com ವೆಬ್‌ಸೈಟನ್ನು ಸಂಪರ್ಕಿಸಲು ಪ್ರಕಟನೆಯಲ್ಲಿ ಕೋರಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News