ಉಳ್ಳಾಲ : ಯುವಕ ಆತ್ಮಹತ್ಯೆ
Update: 2016-02-20 20:20 IST
ಉಳ್ಳಾಲ: ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಬಂಡಿಕೊಟ್ಯದಲ್ಲಿ ಶನಿವಾರ ಮುಂಜಾನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡಾತನನ್ನು ಬಂಡಿಕೊಟ್ಯ ನಿವಾಸಿ ಶರಣ್ (35) ಎಂದು ಹೆಸರಿಸಲಾಗಿದೆ. ಅವಿವಾಹಿತರಾಗಿದ್ದ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಇದರಿಂದ ಜೀವನದಲ್ಲಿ ಜುಗುಪ್ಸೆ ಹೊಂದಿ ಮನೆ ಮಂದಿಗೆ ತಿಳಿಯದ ರೀತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಪೊಲೀಸರು ಶಂಕಿಸಿದ್ದಾರೆ.