×
Ad

ದಿಲ್ಲಿ ಪೊಲೀಸರ ಯು-ಟರ್ನ್

Update: 2016-02-23 23:59 IST

ಹೊಸದಿಲ್ಲಿ, ಫೆ.23: ಜಾಮೀನು ಬಿಡುಗಡೆ ಕೋರಿ ದಿಲ್ಲಿ ಹೈಕೋರ್ಟ್‌ನಲ್ಲಿ ಕನ್ಹಯ್ಯ ಸಲ್ಲಿಸಿದ ಜಾಮೀನು ಮನವಿಯನ್ನು ದಿಲ್ಲಿ ಪೊಲೀಸರು ವಿರೋಧಿಸಿದ್ದು, ತಮ್ಮ ಹಿಂದಿನ ನಿರ್ಧಾರದಿಂದ ಯು-ಟರ್ನ್ ಪಡೆದುಕೊಂಡಿದ್ದಾರೆ.

‘ಬದಲಾದ ಪರಿಸ್ಥಿತಿಯ ಹಿನ್ನೆಲೆಯಲಿ’್ಲ ಕನ್ಹಯ್ಯೆಗೆ ಜಾಮೀನು ನೀಡುವುದನ್ನು ವಿರೋಧಿಸುವುದಾಗಿ ದಿಲ್ಲಿ ಪೊಲೀಸ್ ಆಯುಕ್ತ ಬಿ.ಎಸ್.ಬಸ್ಸಿ ತಿಳಿಸಿದ್ದಾರೆ. ಒಂದು ವೇಳೆ ಆತ ಜಾಮೀನು ಪಡೆದು ಹೊರಬಂದಲ್ಲಿ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆಯೆಂದು ಅವರು ಹೇಳಿದ್ದಾರೆ. ಈ ಮೊದಲು ದಿಲ್ಲಿ ಪೊಲೀಸರು, ಕನ್ಹಯ್ಯಾ ಜಾಮೀನು ಮನವಿಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವುದಿಲ್ಲವೆಂದು ತಿಳಿಸಿದ್ದರು.

ದೇಶದ್ರೋಹದ ಆರೋಪದ ಹಿನ್ನೆಲೆಯಲ್ಲಿ ತಲೆಮರೆಸಿಕೊಂಡು, ಪ್ರಸ್ತುತ ಜೆಎನ್‌ಯು ವಿವಿಯ ಆವರಣದಲ್ಲಿ ಕಾಣಿಸಿಕೊಂಡಿರುವ ಇತರ ಐವರು ಜೆಎನ್‌ಯು ವಿದ್ಯಾರ್ಥಿಗಳು ತನಿಖೆಗೆ ಸಹಕರಿಸದಿದ್ದಲ್ಲಿ ಅವರ ವಿರುದ್ಧವೂ ಕ್ರಮ ಕೈಗೊಳ್ಳುವುದಾಗಿ ಬಸ್ಸಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News