ಹೋರಾಟ, ಭಿನ್ನಾಭಿಪ್ರಾಯ ಅಪರಾಧವೇ?

Update: 2016-02-26 18:20 GMT

ಇದುವರೆಗೂ ನನ್ನನ್ನು ಪರಿಚಯಿಸಿದವರು ನನ್ನ ಕುರಿತು ಬಹಳಷ್ಟು ವಿಷಯಗಳನ್ನು ಹೇಳಿದ್ದಾರೆ; ಅದಕ್ಕೆ, ನಾನು ಸಹ ಒಬ್ಬ ಜೆಎನ್‌ಯು ದ ಹಿರಿಯ ವಿದ್ಯಾರ್ಥಿಯಾಗಿದ್ದೇನೆ ಎಂಬ ಹೆಮ್ಮೆಯ ವಿಷಯವನ್ನು ಸೇರಿಸ ಬಯಸುತ್ತೇನೆ. ಆ ನಂತರ ಸುಮಾರು 25ರಿಂದ 30 ವರ್ಷಗಳ ನಂತರ ಈ ವಿಶ್ವವಿದ್ಯಾನಿಲಯದ ಕಾರ್ಯಕಾರಿ ಮಂಡಳಿಯ ಸದಸ್ಯನಾಗಿ 5 ವರ್ಷಗಳ ಕಾಲ ಸೇವೆ ಸಲ್ಲಿಸಲು ಮತ್ತೆ ಇಲ್ಲಿಗೆ ಬಂದೆ. ಆದರೆ ನನ್ನ ಸೇವೆಯ ಶೇ.80ರಷ್ಟು ಸಮಯ ಸುಪ್ರೀಂ ಕೋರ್ಟ್ ತೀರ್ಪು, ಸಂಸತ್ತಿನ ಕಾಯ್ದೆ ಎಲ್ಲವನ್ನೂ ಧಿಕ್ಕರಿಸಿ ಹಿಂದುಳಿದ ವರ್ಗಗಳಿಗೆ ನೀಡಬೇಕಿದ್ದ ಶೇ.27ಮೀಸಲಾತಿಯನ್ನು ಅಲ್ಲಗಳೆಯುತ್ತಿದ್ದ ಕೆಲವು ಜನರನ್ನು ಎದುರಿಸುವುದರಲ್ಲಿಯೇ ಕಳೆದು ಹೋಯಿತು. ಅಂತಿಮವಾಗಿ ನಾವು ಗೆದ್ದೆವು, ಅದು ಬೇರೆ ವಿಚಾರ. ನಿಜ ಹೇಳಬೇಕು ಎಂದರೆ ನಾನು ವಿದ್ಯಾರ್ಥಿಯಾಗಿ ಇಲ್ಲಿನ ಗಂಗಾ ವಸತಿ ನಿಲಯದ ಅಧ್ಯಕ್ಷನಾಗಿದ್ದಾಗ ಇದ್ದಷ್ಟು ಸಂತೋಷ ಇಲ್ಲಿನ ಕಾರ್ಯಕಾರಿ ಮಂಡಳಿಯ ಸದಸ್ಯನಾಗಿದ್ದಾಗ ಇರಲಿಲ್ಲ...
ನಾನು ಇಂದು ದಿಲ್ಲಿಗೆ ನಿಮಗಾಗಿಯೇ ಬಂದಿದ್ದೇನೆ. ನನಗೆ ದಿಲ್ಲಿಯಲ್ಲಿ ಬೇರೆ ಯಾವ ಕೆಲಸವೂ ಇಲ್ಲ. ನಾನು ಏಕೆ ಇಂದು ನಿಮ್ಮ ಎದುರು ನಿಂತಿದ್ದೇನೆ ಎಂದರೆ ಇಂದು ನೀವು ಮಾಡುತ್ತಿರುವ ಹೋರಾಟ ನಿಮ್ಮ ಬೇಡಿಕೆಗಳಿಗೆ ಮಾತ್ರ ಸೀಮಿತವಾಗಿರದೆ ಅದಕ್ಕಿಂತಲೂ ಮೀರಿದ ವಿಶಾಲವಾದ ಸಂಗತಿಯೊಂದರ ಕಡೆಗೆ ನಮ್ಮನ್ನು ಸೆಳೆಯುತ್ತಿದೆ.
ಈ ದೇಶದಲ್ಲಿ ಇಂದು ನಡೆಯುತ್ತಿರುವ ಹೋರಾಟಗಳ ಕುರಿತು ಆದ್ಯತಾ ಪಟ್ಟಿಯೊಂದನ್ನು ತಯಾರು ಮಾಡಿಕೊಂಡರೆ ನಿಮ್ಮ ಹೋರಾಟ 3ನೆ ಸ್ಥಾನದಲ್ಲಿ ಇದೆ. ಆದರೆ ನಿಮಗೆ ನೆನಪಿರಲಿ, ಈ ಹೋರಾಟವನ್ನು ಈ ದೇಶದ ಸಾಮಾನ್ಯ, ಬಡವ, ದಲಿತ ಕಳೆದ ಎರಡು ದಶಕಗಳಿಂದ ನಡೆಸುತ್ತಲೇ ಬರುತ್ತಿದ್ದಾರೆ. ಇಂದು ಆ ಹೋರಾಟ ಜೆಎನ್‌ಯು ಅಂತಹ ಎಲೈಟ್ ವಿಶ್ವವಿದ್ಯಾನಿಲಯಗಳ ಅಂಗಳವನ್ನು ತಲುಪಿದೆ ಅಷ್ಟೆ! ಇದು ನಿಮಗೆ ಅರ್ಥವಾಗಬೇಕು. ನೀವು ನಿಜವಾಗಿಯೂ ಹೋರಾಡುತ್ತಿರುವುದು ಭಿನ್ನಾಭಿಪ್ರಾಯಗಳನ್ನೇ ಅಪರಾಧ ಎಂದು ಸಾಧಿಸಲು ಹೊರಟಿರುವ ಪ್ರಕ್ರಿಯೆಯ ವಿರುದ್ಧ. ನಮ್ಮ ನಡುವೆ ನಡೆಯುತ್ತಿರುವ ಈ ಸಂಗತಿ ಕೇವಲ ಸಂವಿಧಾನಿಕ ಕಾನೂನಿನ ವಿರೋಧ ಅಥವಾ ಅತಿಕ್ರಮಣದ ಪ್ರಕ್ರಿಯೆ ಮಾತ್ರ ಆಗಿ ನೋಡಲಾಗದು, ಬದಲಾಗಿ ಇದು ನಮ್ಮ ನಡುವಿನ ಅಭಿಪ್ರಾಯ ಭಿನ್ನತೆ ಹೊಂದುವವರನ್ನು ಅಪರಾಧಿಗಳೆಂದು ವಿವರಿಸುತ್ತಿರುವ ಮಾದರಿಯ ವಿರುದ್ಧದ ಹೋರಾಟ ಎಂಬ ವಿಶಾಲ ಅರ್ಥದಲ್ಲಿ ನೋಡಬೇಕಿದೆ.
ಇಂದು ನೀವು ಬದುಕುತ್ತಿರುವ ಕಾಲಘಟ್ಟ ಕೇವಲ ಅಸಮಾನತೆಯ ಕಾಲ ಮಾತ್ರವಲ್ಲ ಬದಲಾಗಿ ಕಾರ್ಪೊರೇಟ್ ಶಕ್ತಿಗಳ ದಮನಕಾರಿ ನೀತಿಯನ್ನು ಎದುರಿಸುತ್ತಿದ್ದ ಧ್ವನಿಗಳನ್ನು ಹತ್ತಿಕ್ಕುತ್ತಿರುವ ಕಾಲಘಟ್ಟವೂ ಹೌದು. ಜೀವನದಲ್ಲಿ ಎಂದಿಗೂ ಪೋಲಿಸ್ ಠಾಣೆಯ ಮೆಟ್ಟಿಲು ಹತ್ತಿರದ ಒರಿಸ್ಸಾದ ಕಳಿಂಗಾ ನಗರದಲ್ಲಿನ, ಉತ್ಕಲ್ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದಿರುವ ಅದಿವಾಸಿ ಕುಟುಂಬವೊಂದು ಟಾಟಾ ಕಂಪೆನಿಯನ್ನು ತಮ್ಮ ಭೂಮಿಯ ಹಕ್ಕಿಗಾಗಿ ಎದುರಿಸುತ್ತದೆ ಮತ್ತು ಅನ್ನ ನೀಡುವ ಭೂಮಿಯನ್ನು ಕೊಡಲು ನಿರಾಕರಿಸುತ್ತದೆ. ಪರಿಣಾಮ ಇಂದು ಆ ಕುಟುಂಬದ ಮೇಲೆ 91 ಪ್ರಕರಣಗಳು ದಾಖಲಾಗಿವೆ! ಎಷ್ಟು 91 ಪ್ರಕರಣಗಳು!
ಒಡಿಸ್ಸಾದ ಜಗತ್ ಸಿಂಗ್ಪುರ್‌ನಲ್ಲಿ ಪೊಕ್ಸೊ ವಿರುದ್ಧದ ಹೋರಾಟದ ನಾಯಕ ಅಭಯ್ ಸಾಹು, ನಿಮಗೆ ನೆನಪಿರಲಿ ಈತ ಹೋರಾಡಿ ಪೊಕ್ಸೊವನ್ನು ಮಣಿಸಿದ್ದಾನೆ; ಪ್ರತಿಬಾರಿ ಅವನನ್ನು ಭೇಟಿ ಮಾಡಿದಾಗ ನಾನು ಎಷ್ಟಾದವು ಎಂದು ಆತನನ್ನು ಕೇಳುತ್ತೇನೆ, ಆತ ತನ್ನ ಮೇಲೆ ದಾಖಲಾಗಿರುವ ಪ್ರಕರಣಗಳ ಮಾಹಿತಿಯನ್ನು ನೀಡುತ್ತಿರುತ್ತಾನೆ ಕಳೆದ ಬಾರಿಯ ಭೇಟಿಯಲ್ಲಿ ಆತನ ಮೇಲೆ 56 ರಿಂದ 58 ಪ್ರಕರಣಗಳು ದಾಖಲಾಗಿದ್ದವು. ಆ ಹಳ್ಳಿಯ ಜನ ಪ್ರಕರಣಗಳಿಗೆ ಹೆದರಿ ಹಳ್ಳಿಯಿಂದ ಹೊರಬರುವುದನ್ನೇ ಬಿಟ್ಟು ಬಿಟ್ಟಿದ್ದಾರೆ ಆ ಕಾರಣಕ್ಕೆ ಅವರುಗಳಿಗೆ ಅಣ್ಣ, ತಮ್ಮ ಬಂಧುಗಳನ್ನು ಭೇಟಿಯಾಗಲು ಸಾಧ್ಯವಾಗುತ್ತಿಲ್ಲ.
ನೀವು ರಿಲಯನ್ಸ್ ಮತ್ತು ಎಸ್‌ಇಝೆಡ್ (ವಿಶೇಷ ಆರ್ಥಿಕ ವಲಯ) ಪ್ರಾಜೆಕ್ಟ್‌ಗಳನ್ನು ವಿರೋಧಿಸುತ್ತಿರುವ ದೇಶದ ಯಾವುದೇ ಭಾಗವನ್ನು ಸಂದರ್ಶಿಸಿ ಇದು ನಿಮಗೆ ಕಾಣಿಸುತ್ತದೆ. ಇಂದು ಪ್ರಕರಣಗಳನ್ನು ದಾಖಲಿಸಿ ಹೋರಾಟಗಳನ್ನು ಹತ್ತಿಕ್ಕುವುದು ಒಂದು ತಂತ್ರವಾಗಿಬಿಟ್ಟಿದೆ. ಇದು ಇಲ್ಲಿ ಮಾತ್ರ ನಡೆಯುತ್ತಿಲ್ಲ, ಬದಲಾಗಿ ದೇಶದ ಎಲ್ಲ ಕಡೆ ನಡೆಯುತ್ತಿದೆ. ಉದಾಹರಣೆಗೆ ನೀವು ಒಂದು ಸಂಗತಿಯನ್ನು ಎದುರಿಸಿ ಪ್ರತಿಭಟನೆ ನಡೆಸಿದರೆ ಪೋಲಿಸರು ಕನ್ಹಯ್ಯಿ ಕುಮಾರ್ ಮತ್ತು 800 ಇತರರು ಎಂದು ಪ್ರಕರಣ ದಾಖಲಿಸಿಬಿಡುತ್ತಾರೆ. ಇದು ಅವರಿಗೆ ಸುತ್ತ ಮುತ್ತಲಿನ ಹಳ್ಳಿಗಳನ್ನು ಮುಂದಿನ ಮೂರು ವರ್ಷಗಳ ಕಾಲ ದಾಳಿ ಮಾಡಲು ಮತ್ತು ಜನರನ್ನು ಹೆದರಿಸಲು ಸಹಕಾರಿಯಾಗುತ್ತದೆ ಎ.ಬಿ.ಸಿ ಮತ್ತು 800 ಇತರರು ಪೋಲಿಸರ ಮೇಲೆ ಹಲ್ಲೆ ನಡೆಸಿದರು ಎಂದು ಪ್ರಕರಣ ದಾಖಲಾಗುತ್ತದೆ.
ಕೋರಾಪುರದ ಜೈಲಿನಲ್ಲಿ ನಾನು ಒಬ್ಬರನ್ನು ಭೇಟಿಯಾಗಲು ಹೋಗಿದ್ದೆ. ವೃತ್ತಿಯಲ್ಲಿ ಅವರು ರಸಾಯನಶಾಸ್ತ್ರದ ಪ್ರಾಧ್ಯಾಪಕರು. ಆದರೆ ನಮಗೆ ಅವರನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲ. ಆದರೆ ಅವರ ವಕೀಲರು ನಮ್ಮಾಡನೆ ಮಾತನಾಡಿದರು. ನಿಮಗೆ ಕೇಳಿ ಆಶ್ಚರ್ಯವಾಗುತ್ತದೆ. ಒಬ್ಬ ರಸಾಯನ ಶಾಸ್ತ್ರದ ಪ್ರಾಧ್ಯಾಪಕರ ಮೇಲೆ ಎಮ್ಮೆ ಕದ್ದ ಆರೋಪ ಹೋರಿಸಿ ಪ್ರಕರಣ ದಾಖಲಿಸಲಾಗಿದೆ. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಈ ರೀತಿಯ ಪ್ರಕರಣಗಳು ನಮ್ಮ ಮೇಲೆಯೂ ದಾಖಲಾಗಿವೆ. ಇಲ್ಲಿ ಆ ಪ್ರಾಧ್ಯಾಪಕರನ್ನು ಮತ್ತು ಎಮ್ಮೆಯನ್ನು ನಮಗೆ ಭೇಟಿಯಾಗಲು ಸಾಧ್ಯವಾಗಲಿಲ್ಲ ಅದು ಬೇರೆ ವಿಚಾರ.
ಸೀತಾಕುಲಂ ಜಿಲ್ಲೆಯಲ್ಲಿನ ಪೋರ್ಟ್ ವಿರುಧ್ಧದ ಹೋರಾಟದಲ್ಲಿ 78 ವರ್ಷದ ಮಹಿಳೆಯ ಮೇಲೆ, ಈ ವರ್ಷ ಆಕೆಗೆ 80 ವರ್ಷ ತುಂಬು ತ್ತದೆ. ಆಕೆಯ ಮೇಲೆ ಪೋಲಿಸರನ್ನು ಕೊಲ್ಲುವುದಕ್ಕೆ ಪ್ರಯತ್ನಿಸಿದ್ದು ಸೇರಿದಂತೆ 23 ಪ್ರಕರಣಗಳು ದಾಖಲಾಗಿವೆ. ಆಕೆ ಸುಮಾರು ಐದು ಅಡಿ ಇರಬಹುದು. 35 ಕೆ.ಜಿ ತೂಕವನ್ನು ಹೊಂದಿರಬಹದು. ಆಕೆ ದಾಳಿ ಮಾಡಲು ಬಂದ 20 ರಿಂದ 23 ಜನ ಪೋಲಿಸರನ್ನು ಕೊಲ್ಲಲು ಯತ್ನಿಸಿದಳು ಎಂಬ ಆರೋಪವನ್ನು ಹೊರಿಸಲಾಗಿದೆ. ಈ ಪ್ರವೃತ್ತಿಯೀಗ ಎಲೈಟ್ ವಿಶ್ವವಿದ್ಯಾನಿಲಯವನ್ನು ತಲುಪಿರುವುದನ್ನು ಸ್ವಾಗತಿಸಬೇಕಿದೆ ಮತ್ತು ಇಂತಹದರ ವಿರುದ್ಧ ನಾವು ಪ್ರತಿಭಟಿಸಬೇಕಿದೆ.
ನಾನು ನಾಳೆಗೆ ಎಲ್ಲವೂ ಸರಿಹೋಗಿಬಿಡುತ್ತದೆ ಎಂದು ಹೇಳುತ್ತಿಲ್ಲ. ನನಗೆ ಅನ್ನಿಸುವಂತೆ ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನೂ ಭೀಕರವಾಗಲಿದೆ. ಆದರೆ ಭವಿಷ್ಯದಲ್ಲಿ ಖಂಡಿತಾ ಪರಿಸ್ಥಿತಿ ಉತ್ತಮಗೊಳ್ಳುತ್ತದೆ. ಆದರೆ ಅದಕ್ಕೂ ಮುಂಚೆ ಅತ್ಯಂತ ದುರ್ಗಮ ದಾರಿಯನ್ನು ಪರಿಸ್ಥಿತಿಯನ್ನು ನಾವು ನೋಡಬೇಕಿದೆ. ಆದರೆ ಭವಿಷ್ಯ ಹೇಗೆ ಬದಲಾಗುತ್ತದೆ ಎಂಬುದು ನಾವು ಮತ್ತು ನಮ್ಮ ಕಾನೂನು ಹೇಗೆ ಕೆಲಸ ಮಾಡುತ್ತೇವೆ ಎಂಬುದು ನಿರ್ಧರಿಸಲಿದೆ. ನನಗೆ ಜೆಎನ್‌ಯು ವಿದ್ಯಾರ್ಥಿ ಸಮುದಾಯದಲ್ಲಿ ಅಪಾರವಾದ ನಂಬಿಕೆಯಿದೆ. ಆ ಕಾರಣಕ್ಕೆ ನಾನು ನಿಮ್ಮೆಳಗೆ ಒಬ್ಬನಾಗಿ ಇಂದು ಇಲ್ಲಿ ನಿಂತಿದ್ದೇನೆ ಈ ಹೋರಾಟದಲ್ಲಿ ನೀವು ಗೆದ್ದೇ ಗೆಲ್ಲುತ್ತೀರಾ ಎಂಬ ನಂಬಿಕೆ ನನಗಿದೆ.
ನೀವು ಇಂದು ಈ ದೇಶ ಎಂದೂ ಕಂಡಿರದ ಅಸಮಾನತೆಯ ಕಾಲದಲ್ಲಿ ನಿಂತಿದ್ದೀರಾ ಜೊತೆಗೆ ಹೆಚ್ಚುತ್ತಿರುವ ಮೂಲಭೂತವಾದಿ ಶಕ್ತಿಗಳು ನಮ್ಮ ಮುಂದಿವೆ. ನನ್ನ ದೃಷ್ಟಿಯಲ್ಲಿ ಇಂದು ಭಾರತ ಸಾಮಾಜಿಕ ಮತ್ತು ಧಾರ್ಮಿಕ ಮೂಲಭೂತವಾದಿಗಳು ಮಾರುಕಟ್ಟೆ ಶಕ್ತಿಗಳೊಂದಿಗೆ ಸೇರಿ ಮಾಡಿಕೊಂಡಿರುವ ಮೈತ್ರಿಕೂಟದಿಂದ ಆಳಲ್ಪಡುತ್ತಿದೆ. ಇದು ನನ್ನ ಅಭಿಪ್ರಾಯ ಆಗಿದೆ ಈ ಕುರಿತ ಚರ್ಚೆಗೆ ನಾನು ಸಿದ್ಧನಿದ್ದೇನೆ. ಆ ಎರಡು ಶಕ್ತಿಗಳು (ಸಾಮಾಜಿಕ ಮತ್ತು ಧಾರ್ಮಿಕ ಮೂಲಭೂತವಾದಿಗಳು ಮತ್ತು ಮಾರುಕಟ್ಟೆ ಶಕ್ತಿಗಳು) ಪರಸ್ಪರ ಹೊಂದಿಕೊಂಡೇ ಸಾಗುವ ಅನಿವಾರ್ಯತೆಯನ್ನು ಹೊಂದಿವೆ. ತುಂಬಾ ಸಾರಿ ಬಹಳ ದೊಡ್ಡ ಸಂಖ್ಯೆಯ ಜನರು ಮಾರುಕಟ್ಟೆ ಮೂಲಭೂತವಾದಿಗಳು ಮತ್ತು ಧಾರ್ಮಿಕ ಮೂಲಭೂತವಾದಿಗಳಾಗಿರುವುದನ್ನು ನಾವು ಕಾಣಬಹುದಾಗಿದೆ...
ಮಾರುಕಟ್ಟೆ ಮೂಲಭೂತವಾದಿಗಳು ಯಾವ ಧಾರ್ಮಿಕ ಮೂಲಭೂತವಾ ದಿಗಳಿಂತ ಕಡಿಮೆ ಇಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಬೇಕಿದೆ. ಈ ಎರಡು ಶಕ್ತಿಗಳು ತಮ್ಮದೇ ಆದ ಪವಿತ್ರ ಗ್ರಂಥಗಳು, ಪುರಾಣಗಳು, ದೈವವಾಣಿಗಳು ಮತ್ತು ಪಂಡಿತರನ್ನು ಹೊಂದಿವೆ. ಮಾರುಕಟ್ಟೆ ಮೂಲಭೂತವಾದಿಗಳು, ಧಾರ್ಮಿಕ ಮೂಲಭೂತವಾದಿಗಳಿಗಿಂತ ಹೆಚ್ಚು ಟಿ.ವಿ ವಕ್ತಾರರನ್ನು ಹೊಂದಿದ್ದಾರೆ ಅವರು ಪ್ರತಿದಿನ ಸಂಜೆ ಎಲ್ಲ ಚಾನೆಲ್‌ಗಳಲ್ಲಿಯೂ ಕಾಣಲು ಸಿಗುತ್ತಾರೆ...
ಅಭಿವೃದ್ಧಿ, ಆಯ್ಕೆ ಎಂಬ ಮಾರುಕಟ್ಟೆ ಮೂಲಭೂತವಾದಿಗಳ ದೈವವಾಣಿಗಳು ಜೆಎನ್‌ಯು ವಿದ್ಯಾರ್ಥಿಗಳಾದ ನಿಮಗೆ ಗೊತ್ತಿರುತ್ತವೆ. ಮಾರುಕಟ್ಟೆ ನಿಜಕ್ಕೂ ನಮಗೆ ಆಯ್ಕೆಯ ಸ್ವಾತಂತ್ರ್ಯ ನೀಡುತ್ತದೆಯೇ? ಈ ಕುರಿತು ವಿಸ್ತೃತ ಚರ್ಚೆಗಳು ಆಗುತ್ತಿರುತ್ತವೆ, ಇತ್ತೀಚೆಗೆ ವಾರ ಅಥವಾ ಹತ್ತು ದಿನಗಳ ಹಿಂದೆ ನಮ್ಮ ನಡುವಿನ ಇಬ್ಬರು ಮಾರುಕಟ್ಟೆ ಮೂಲಭೂತವಾದಿಗಳು ಒಂದು ಟಿ.ವಿ ವಾಹಿನಿಯಲ್ಲಿ ಥಾಮೇಸ್ ಪೀಕೆಟಿ ಅವರೊಂದಿಗೆ ಚರ್ಚಿಸುತ್ತಾ ಅಸಮಾನತೆ ಎಂಬುದು ಅಂಥ ತಲೆಕೆಡಿಸಿಕೊಳ್ಳಬೇಕಾದ ಸಂಗತಿಯಲ್ಲ ಮತ್ತು ಜನರ ಸಂಪತ್ತು ಮುಳುಗುತ್ತಿರುವುದು ದೊಡ್ಡ ವಿಷಯವಾಗಬೇಕಿಲ್ಲ ಎಂದು ವಾದಿಸುತ್ತಿದ್ದರು. ಹೀಗೆ ವಾದಿಸುತ್ತಿದ್ದವರು ವಿವೇಕ್ ಡಿಬ್ರಾಯ್ ಮತ್ತು ನಮ್ಮ ಸರಕಾರದ ಮುಖ್ಯ ಆರ್ಥಿಕ ಸಲಹೆಗಾರರಾದ ಅರವಿಂದ ಸುಬ್ರಹ್ಮಣ್ಯ. ನನಗೆ ನೀತಿ ಅಯೋಗದ ವಿವೇಕ್ ಡಿಬ್ರಾಯ್ ಅವರೊಂದಿಗೆ ಯಾವುದೇ ಸಮಸ್ಯೆಗಳಿಲ್ಲ, ತಮಿಳುನಾಡಿನ ನನ್ನ ಸ್ನೇಹಿತರು ‘‘ನೀತಿ ಅಯೋಗ’’ವನ್ನು ‘‘ನೀತಿ ಅಯ್ಯೂ’’ ಎಂದು ಕರೆಯುತ್ತಾರೆ. ಇವರು ಹೇಳುತ್ತಿದ್ದರು ಇಂದು ಮಾರುಕಟ್ಟೆಯಲ್ಲಿ ಹೂಡಿದ ಹಣವನ್ನು ಜನರು ಕಳೆದುಕೊಳ್ಳುತ್ತಿದ್ದರೆ ಅದು ಅವರ ವ್ಯವಹಾರ, ಅದಕ್ಕೂ ನಮಗೂ ಸಂಬಂಧವಿಲ್ಲ ಎನ್ನುತ್ತಿದ್ದಂತೆ ಅರವಿಂದ ಸುಬ್ರಹ್ಮಣ್ಯ ಅವರು ‘ವಿವೇಕ್ ಸರಿಯಾಗಿ ಹೇಳುತ್ತಿದ್ದಾರೆ’ ಎನ್ನುತ್ತಿದ್ದರು. ಅವರ ಇಬ್ಬರ ಅಲೋಚನೆಗಳು ಒಂದೇ ಆಗಿವೆ...
ನಾವು ಮಾರುಕಟ್ಟೆ ಮೂಲಭೂತವಾದದ ಕುರಿತು ನಮ್ಮೆದುರು ಬರುತ್ತಿರುವ ಅಸಮಾನತೆಯ ಮಾದರಿಗಳ ಕುರಿತು ಮಾತನಾಡುವಾಗ ಯುಪಿಎ ಮತ್ತು ಎನ್.ಡಿ.ಎ ನಿಲುವುಗಳಲ್ಲಿ ಅಂತಹ ಅಂತರ ಕಾಣಲಾಗುವುದಿಲ್ಲ. ಈ ಸಂದರ್ಭದಲ್ಲಿ ವೃತ್ತಿಯಲ್ಲಿ ನನ್ನ ಸಹೋದ್ಯೋಗಿಯಾದ ಅರುಣ್ ಶೌರಿ ಅವರ ಮಾತೊಂದನ್ನು ನೆನಪಿಸಿಕೊಳ್ಳಬೇಕು. ಅವರು ಬಿಜೆಪಿ ಎಂದರೆ ಕಾಂಗ್ರೆಸ್+ಗೋವು ಎಂಬ ವಿಮರ್ಶೆಯನ್ನು ಅರುಣ್ ಶೌರಿ ಮಾಡಿದ್ದರು. ಅವರ ಪ್ರಕಾರ ದೇಶದ ನೀತಿಗಳ ರಚನೆಯ ವಿಷಯದಲ್ಲಿ ಬಿಜೆಪಿ ಎಂದರೆ ದನದ ವಿಷಯವನ್ನು ಸೇರಿಸಿಕೊಂಡ ಮತ್ತೊಂದು ಕಾಂಗ್ರೆಸ್ ಅಷ್ಟೆ ಎಂದುಬಿಟ್ಟಿದ್ದರು....
ನಾವು ಮಹಾರಾಷ್ಟ್ರಕ್ಕೆ ಬಂದರೆ ನೀವು ಪತ್ರಿಕೆಗಳಲ್ಲಿ ನೋಡುತ್ತಲೇ ಇರುತ್ತೀರ, ಅಲ್ಲಿ ಗೋಮಾಂಸ ಸೇವನೆಯನ್ನು ನಿಷೇಧಿಸಲಾಗಿದೆ. ಈ ನಿಷೇಧದ ಹಿಂದಿರುವ ಬಹಳ ಪ್ರಮುಖವಾದ ನಂಬಿಕೆ ಮೂಲಭೂತವಾದಿಗಳು ಗೋವನ್ನು ಪವಿತ್ರ ಎಂದು ಭಾವಿಸುತ್ತಾರೆ ಎಂಬುದು. ಉಳಿದೆಡೆಗಳಲ್ಲಿಯೂ ಗೋವನ್ನು ಬಹಳ ಪವಿತ್ರ ಎಂದು ಗುರುತಿಸಲಾಗುತ್ತದೆ. ಅದಕ್ಕಿಂತ ಮುಖ್ಯವಾಗಿ ಕೃಷಿ ಪ್ರಧಾನ ಸಮುದಾಯಗಳನ್ನು ಹೊಂದಿರುವ ಭಾರತದಲ್ಲಿ ಗೋವು ಕೃಷಿ ಆರ್ಥಿಕತೆಯಲ್ಲಿ ಮಹತ್ವದ ಸ್ಥಾನ ಹೊಂದಿದೆ. ಅದರಲ್ಲಿ ಯಾವುದೇ ಸಂಶಯವಿಲ್ಲ...
ಅದರೆ ಇಂದು ಜಾರಿಯಲ್ಲಿರುವ ಗೋವುಗಳನ್ನು ಮಾಂಸಕ್ಕಾಗಿ ಕೊಲ್ಲುವುದು ಮತ್ತು ಮಾರಾಟ ಮಾಡುವುದರ ಮೇಲಿನ ನಿಷೇಧ (ಈ ನಿಷೇಧ ಎಮ್ಮೆ ಕೋಣಗಳ ಮೇಲೂ ಹೇರಲಾಗುತ್ತಿದೆ) ಮೂಲಭೂತವಾದಿಗಳ ಅಲೋಚನೆಯಾಗಿದೆ. ಈ ಕುರಿತಂತೆ ನಾವು ಸ್ಪಲ್ಪ ತಿಳಿದುಕೊಳ್ಳಬೇಕಿದೆ. ನೀವು ನಮ್ಮ ಇತ್ತೀಚಿನ ಜನಸಂಖ್ಯೆ ವರದಿಯ ಅಂಕಿ-ಅಂಶಗಳನ್ನು ನೋಡಿದರೆ ಐಡಿಯಾಲಜಿಕಲಿ ಮತ್ತು ಧಾರ್ಮಿಕವಾಗಿ ಈ ದೇಶದ ಶೇ.42ರಷ್ಟು ಜನಸಂಖ್ಯೆಗೆ ಗೋ ಮಾಂಸ ಸೇವನೆಗೆ ಯಾವುದೇ ತಕರಾರು ಇಲ್ಲ. ಅದರಾಚೆಗೆ ಹಿಂದೂ ಎಂದು ಕರೆಯಲ್ಪಡಬಹುದಾದ ಬಹುದೊಡ್ಡ ಜನಸಂಖ್ಯೆಯ ಬಹಳಷ್ಟು ಮಂದಿಗೆ ಗೋ ಮಾಂಸ ಒಂದು ಸಮಸ್ಯೆಯೇ ಅಲ್ಲ! ಕೇರಳದಲ್ಲಿ ಬಿಜೆಪಿಯ ನಾಯಕರು ಗೋಮಾಂಸ ತಿನ್ನುತ್ತಿರುವ ವೀಡಿಯೊ ಅಂತರ್ಜಾಲದಲ್ಲಿ ಸಂಚಲನ ಸೃಷ್ಟಿಸಿದೆ. ಅದಕ್ಕೆ ಪ್ರತಿಯಾಗಿ ನಾನು ಗೋ ಮಾಂಸ ತಿನ್ನುತ್ತಿರುವುದು ಮೂರು ವರ್ಷಗಳ ಹಿಂದೆ! ಇಲ್ಲ ಇಲ್ಲ ಇದು ಗೋಮಾಂಸ ಅಲ್ಲ ಇದು ಈರುಳ್ಳಿ ಪಕೋಡಾ! ಎಂಬ ಕೆಲವು ವೀಡಿಯೊಗಳನ್ನು ಹರಿಬಿಡಲಾಗಿದೆ. ಆದರೆ ಈ ಸಂಗತಿಯಿಂದ ನಾವು ಅರ್ಥಮಾಡಿಕೊಳ್ಳಬಹುದಾದ ವಿಷಯ ಕೇರಳದಲ್ಲಿ ಬಹುಪಾಲು ಜನ ಪಕ್ಷಾತೀತವಾಗಿ ಗೋಮಾಂಸ ಸೇವಿಸುತ್ತಾರೆ ಎಂಬುದು...
ಇನ್ನು ಮಹಾರಾಷ್ಟ್ರಕ್ಕೆ ಬರುವುದಾದರೆ ಅಲ್ಲಿ ಗೋಮಾಂಸ ನಿಷೇಧಿಸಿದ ಮೊದಲ ವಾರ ಭಜರಂಗ ದಳದ ಹುಡುಗರು ಎಲ್ಲ ರಸ್ತೆಗಳಲ್ಲಿ ನಿಂತು ವಾಹನಗಳಲ್ಲಿ ಯಾವ ಮಾಂಸ ಇದೆ ಎಂದು ಪರಿಶೀಲಿಸುತ್ತಿದ್ದರಿಂದ ಮುಂಬೈಯ ಮೃಗಾಲಯಗಳಲ್ಲಿನ ಹುಲಿ ಮತ್ತು ಸಿಂಹಗಳಿಗೆ ಚಿಕನ್ ಸರಬರಾಜು ಮಾಡಲಾಯಿತು. ಇಲ್ಲಿ ಇನ್ನೊಂದು ವಿಷಯವಿದೆ. ಈ ಬಿಜೆಪಿ ಭಜರಂಗದಳ, ವಿಶ್ವಹಿಂದೂ ಪರಿಷದ್, ಆರೆಸ್ಸೆಸ್ ಎಲ್ಲವೂ ಬೇರೆ ಬೇರೆ ಸಂಘಟನೆಗಳು ಎಂಬ ಒಂದು ವಾದವನ್ನು ಮುಂದಿಡಲಾಗುತ್ತದೆ. ನಮ್ಮ ಸೆಕ್ಯುಲರ್ ಮಿತ್ರರು ಇಲ್ಲ ಇಲ್ಲ ಅವೆಲ್ಲವೂ ಒಂದೇ ಎಂದು ಗಟ್ಟಿಯಾಗಿ ಹೇಳುತ್ತಿರುತ್ತಾರೆ. ಆದರೆ ವಾಸ್ತವದಲ್ಲಿ ಈ ಎಲ್ಲಸಂಘಟನೆಗಳು ಒಂದೇ ಅಲ್ಲ ಬದಲಾಗಿ ಬೇರೆ ಬೇರೆ, ಈ ಸತ್ಯವನ್ನು ನಾವು ಅರ್ಥಮಾಡಿಕೊಳ್ಳಬೇಕಿದೆ. ಇವರೆಲ್ಲಾ ಯಾರು ಎಂದು ನಾವು ನೋಡಿದರೆ ಬಿಜೆಪಿ ರಾಜಕೀಯ ರಂಗದಲ್ಲಿನ ಆರೆಸ್ಸೆಸ್ ಆಗಿದ್ದರೆ, ವಿಶ್ವಹಿಂದೂ ಪರಿಷತ್ ಹುಡುಗರ ತಲೆಯಲ್ಲಿ ಧಾರ್ಮಿಕ ನಶೆಯನ್ನು ತುಂಬುವಲ್ಲಿ ಬಿಜೆಪಿ ತರ ಕೆಲಸ ಮಾಡುತ್ತದೆ, ಇನ್ನು ಭಜರಂಗದಳ ಕಟ್ಟಡಗಳನ್ನು, ಬದುಕುಗಳನ್ನು ಒಡೆಯುವುದರಲ್ಲಿ ವಿಶ್ವಹಿಂದೂ ಪರಿಷತ್ ನಂತೆ ಕೆಲಸ ಮಾಡುತ್ತದೆ. ಆದ್ದರಿಂದ ನಾವು ಇವುಗಳ ನಡುವಿನ ಈ ವ್ಯತ್ಯಾಸವನ್ನು ಗುರುತಿಸಬೇಕಿದೆ....

ಇನ್ನು ನಾವು ಹುಲಿ ಸಿಂಹಗಳಿಗೆ ಚಿಕನ್ ತಿನ್ನಿಸಿದ ಘಟನೆಗೆ ಮರಳುವುದಾದರೆ ಮುಂಬೈಯ ಮೃಗಾಲಯದಲ್ಲಿ ಒಂದು ವಾರಗಳ ಕಾಲ ಹುಲಿ ಸಿಂಹಗಳಿಗೆ ಚಿಕನ್ ತಿನ್ನಿಸಿದ ಪರಿಣಾಮ ಸಮಸ್ಯೆಯಾಗಿ ಇಡಿ ಮಹಾರಾಷ್ಟ್ರದಲ್ಲಿನ ಪಶುಗಳ ಮಾರುಕಟ್ಟೆ ಕುಸಿದು ಬಿತ್ತು. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಮತ್ತು ದಲಿತರು ಸೇರಿದಂತೆ ಸಾವಿರ ಸಾವಿರ ಜನ ತೊಂದರೆಗೆ ಅತಂಕಕ್ಕೆ ಒಳಗಾದರು. ಇವರ್ಯಾರಿಗೂ ಗ್ರಾಮೀಣ ಆರ್ಥಿಕತೆಯಲ್ಲಿ ಗೋವಿನ ಪಾತ್ರದ ಕುರಿತ ಕೊಂಚವೂ ಅರಿವಿರಲಿಲ್ಲ. ಹಾಗೆ ನೋಡಿದರೆ ಗ್ರಾಮೀಣ ಭಾರತದ ಆರ್ಥಿಕತೆಯಲ್ಲಿ ಗೋವು ಮಹತ್ವದ ಪಾತ್ರ ವಹಿಸುತ್ತದೆ...
ಇದನ್ನೆಲ್ಲಾ ಆಧರಿಸಿ ಮೊನ್ನೆ ಟೈಮ್ಸ್ ಆಫ್ ಇಂಡಿಯಾ ಕೊಲ್ಲಾಪುರದ ಚಪ್ಪಲಿ ಉದ್ಯಮ ಕುಸಿದು ಬಿದ್ದಿರುವ ಕುರಿತು ಬಹಳ ಅಧ್ಬುತವಾದ ವರದಿಗಳನ್ನು ಪ್ರಕಟಿಸಿತು. ಇದು ಒಂದು ಅರ್ಥದಲ್ಲಿ ಮೇಕ್ ಇನ್ ಇಂಡಿಯಾ, ಬ್ರೇಕ್ ಇನ್ ಇಂಡಿಯಾ ಎನ್ನುವಂತಿದೆ. ನಿಮಗೆ ಗೊತ್ತಿರಲಿ ಕೊಲ್ಲಾಪುರದ ಚಪ್ಪಲಿಗಳು ಅಂತರಾಷ್ಟ್ರೀಯ ಬ್ರಾಂಡ್ ಹೊಂದಿವೆ, ಜಾಗತೀಕರಣ, ಉದಾರಿಕರಣಕ್ಕೂ ಪೂರ್ವದಲ್ಲಿಯೇ ಜಗತ್ತಿನ ಎಲ್ಲಾ ಭಾಗಗಳಿಗೆ ತಮ್ಮ ಉತ್ಪನ್ನಗಳನ್ನು ರಫ್ತು ಮಾಡಿದ ಹಿರಿಮೆ ಕೊಲ್ಲಾಪುರದ ಚಪ್ಪಲಿ ಉದ್ಯಮಕ್ಕೆ ಇತ್ತು. ಆದರೆ ಇಂದು ಪ್ರಾಣಿ ಮತ್ತು ಗೋ ಹತ್ಯೆ ನಿಷೇಧದಿಂದ ಅ ನಿಷೇಧವನ್ನು ಎಮ್ಮೆ ಮತ್ತು ಕೋಣಗಳಿಗೂ ವಿಸ್ತರಿಸಿರುವುದರಿಂದ ಕೊಲ್ಲಾಪುರದ ಚಪ್ಪಲಿ ಉದ್ಯಮ ನೆಲ ಕಚ್ಚಿದೆ. ನಿಜವಾಗಿಯೂ ಕೊಲ್ಲಾಪುರದ ಚಪ್ಪಲಿ ಉದ್ಯಮವನ್ನು ನಡೆಸುತ್ತಿದ್ದವರು ಮುಸ್ಲಿಂ ಜನರಲ್ಲ ಬದಲಾಗಿ ದಲಿತರು. ಸರಕಾರದ ಈ ಕ್ರಮದಿಂದ ಒಂದು ಕಡೆ ಮುಸ್ಲಿಮರು ತೊಂದರೆಗೆ ಒಳಗಾದರೆ ಮತ್ತೊಂದು ಕಡೆ ದಲಿತರನ್ನು ತುಳಿದು ಹಾಕಲಾಗಿದೆ. ಅದರ ಜೊತೆಗೆ ಪಶುಗಳ ಉದ್ಯಮಗಳಲ್ಲಿ ತೊಡಗಿದ್ದ ಮರಾಠ ಇತ್ಯಾದಿ ಹಿಂದುಳಿದ ವರ್ಗಗಳನ್ನು ನಾಶಮಾಡಲಾಗಿದೆ. ಒಂದು ಗುಂಪಿನ ದಾಳಿಗೆ/ಕೆಲಸಕ್ಕೆ ಇಂದು ನಾವು ಎಲ್ಲಾ ಕಡೆಗಳಿಂದ ಬಂಧನಕ್ಕೆ ಒಳಗಾಗುತ್ತಿದ್ದೇವೆ...
ನಾನು ಇಲ್ಲಿನ ವಿಷಯಕ್ಕೆ ಮರಳುವುದಾದರೆ ಕಳೆದ ಕೆಲ ದಿನಗಳಿಂದ ಕೆಲ ಸ್ನೇಹಿತರು ನನಗೆ ಕರೆ ಮಾಡಿ ನಿಜಕ್ಕೂ ಈ ಸಂಗತಿಗಳು ಘಟಿಸುತ್ತಿವೆಯೇ ಎಂದು ಕೇಳುತ್ತಿದ್ದಾರೆ ನಾವು ಅವರಿಗೆ ಬನ್ನಿ ಗೊತ್ತಾಗುತ್ತದೆ ಇವು ನಮ್ಮ ನಡುವೆ ಘಟಿಸುತ್ತಿರುವ ಸಂಗತಿಗಳೆಂದು ಹೇಳುತ್ತಿದ್ದೇನೆ...
ನಾನು ಇದನ್ನು ಹೀಗೆ ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತೇನೆ. ಇಂದು ಜೆಎನ್‌ಯು ಮತ್ತು ದೇಶದ ಇತರ ಕಡೆಗಳಲ್ಲಿ ನಡೆಯುತ್ತಿರುವ ಹೋರಾಟಗಳಿಂದ ಕೆಲವು ಜನ ಅತಂಕಕ್ಕೆ, ಬೇಸರಕ್ಕೆ ಒಳಗಾದಂತೆ ಕಾಣುತ್ತಾರೆ. ಆದರೆ ಈ ಘಟನೆಗಳು ಅವರಿಗೆ ಆಶ್ಚರ್ಯ ಉಂಟು ಮಾಡಿಲ್ಲ. ಅವರಿಗೆ ಇಂತಹ ಘಟನೆಗಳಿಂದ ಅತಂಕವಾಗುತ್ತದೆ. ಆದರೆ ಆಶ್ಚರ್ಯಕ್ಕೆ ಆಗುವುದಿಲ್ಲ. ಇದನ್ನು ಅರ್ಥಮಾಡಿಕೊಳ್ಳಲು ನಾವು ಸಮಕಾಲೀನ ಭಾರತದ ರಾಜಕೀಯದಲ್ಲಿ ಆದ ಬದಲಾವಣೆಗಳನ್ನು ಗುರುತಿಸಬೇಕು. ದಶಕಗಳ ಕಾಲ ಭಾರತದ ರಾಜಕಾರಣದಲ್ಲಿ ಅನೇಕ ಬದಲಾವಣೆಗಳು ಆಗಿವೆ. ಆದರೆ ಇಂದು ಈ ದೇಶದ ರಾಜಕಾರಣದಲ್ಲಿ ಆಗಿರುವ ಬಹಳ ಬದಲಾವಣೆಯ ಕುರಿತು ನಾವು ಯೋಚಿಸಬೇಕು. ಚಿಂತಿಸಬೇಕು. ಆ ಬದಲಾವಣೆ ಒಬ್ಬ ಸಕ್ರಿಯ ಆರೆಸ್ಸೆಸ್. ಪ್ರಚಾರಕ ಬಹುಮತ ಪಡೆದು ಪ್ರಧಾನಿಯಾಗಿರುವುದು. ಇದು ಭಾರತದ ರಾಜಕಾರಣದಲ್ಲಿ ಆಗಿರುವ ಬಹಳ ದೊಡ್ಡ ಬದಲಾವಣೆ. ಈ ಹಿಂದೆಯೂ ಆರೆಸ್ಸೆಸ್. ಪ್ರಚಾರಕರು ನಮ್ಮ ನಾಯಕರಾಗಿದ್ದಾರೆ, 40 ವರ್ಷಗಳ ಕಾಲ ಪ್ರಚಾರಕರಾಗಿದ್ದವರು. ಆದರೆ ಅವರು ಬಹುಮತವಿಲ್ಲದ ಸರಕಾರವನ್ನು ನಡೆಸುತ್ತಿದ್ದರು. ಆ ಕಾರಣಕ್ಕೆ ಅವರು ಏನು ಮಾಡಬೇಕು, ಏನು ಮಾಡಬಾರದು ಎಂಬುದರ ಕುರಿತು ಕೆಲವು ಮಿತಿಗಳು ಇದ್ದವು. ಆ ಕಾರಣಕ್ಕೆ ಅವರು ‘‘ಸಮ್ಮಿಶ್ರ ಸರಕಾರದ ಧರ್ಮ’’ ಇತ್ಯಾದಿ ಮಾತುಗಳನ್ನು ಆಡುತ್ತಿದ್ದರು. ಆದರೆ ಇಂದು ನಾವು ಬಹುಮತ ಪಡೆದಿರುವ ಒಬ್ಬ ಸಂಘದ ಪ್ರಚಾರಕ ಪ್ರಧಾನಿಯಾಗಿರುವುದನ್ನು ನೋಡುತ್ತಿದ್ದೇವೆ. ಈ ಅಂಶ ಅವರನ್ನು ನಿಜವಾಗಿಯೂ ತಾವು ಏನು ಎಂಬುದನ್ನು ವ್ಯಕ್ತಪಡಿಸಲು ವಾತಾವರಣ ಸೃಷ್ಟಿಮಾಡಿಕೊಟ್ಟಿದೆ. ಅದನ್ನೆ ಅವರು ಮಾಡುತ್ತಿದ್ದಾರೆ ಮತ್ತು ಮಾಡುತ್ತಾರೆ ಕೂಡಾ. ಇದರಿಂದ ನಾವು ಈ ಕುರಿತು ಅತಂಕಕ್ಕೆ ಒಳಗಾಗಿ ಚರ್ಚೆ ಮಾಡಬಹುದೇ ಹೊರತು ಆಶ್ಚರ್ಯಕ್ಕೆ ಒಳಗಾಗುಗುವ ಅಗತ್ಯ ಇಲ್ಲ. ಏಕೆಂದರೆ ಇದು ನೀರಿಕ್ಷಿತ...
ನಾವು ಇಂದು ಎಲ್ಲಾ ಕಡೆಗಳಿಂದ ನಂಬಲಾರದಂತಹ ಅಸಮಾನತೆ ಇರುವ ದೇಶದಲ್ಲಿ ಬದುಕುತ್ತಿದ್ದೇವೆ. ನಿಮ್ಮ ನೀತಿ ಅಯೋಗದ ಜನ, ನಿಮ್ಮ ಆರ್ಥಿಕ ಸಲಹೆಗಾರರು ಈ ಹೆಚ್ಚುತ್ತಿರುವ ಅಸಮಾನತೆಯನ್ನು ದೊಡ್ಡ ಸಮಸ್ಯೆಯಾಗಿ ಪರಿಗಣಿಸುವುದೇ ಇಲ್ಲ ಬದಲಾಗಿ, ಮಾರುಕಟ್ಟೆ ಭಾರತವನ್ನು ಬಿಡುಗಡೆಗೊಳಿಸಿದೆ, ಅಲ್ಪ ಪ್ರಮಾಣದ ಅಸಮಾನತೆ ಇರಬೇಕು, ಇದರಿಂದ ಸ್ಪರ್ಧಾತ್ಮಕ ಮನೋಭಾವ ಬೆಳೆಯುತ್ತದೆ ಎಂಬಿತ್ಯಾದಿ ಮಾತುಗಳನ್ನು ಆಡುತ್ತಿದ್ದಾರೆ...
ಇಂದು ಈ ದೇಶದಲ್ಲಿ 2011ರ ಜನಗಣತಿಯ ಅಂಕಿ-ಅಂಶಗಳನ್ನು ಮುಂದಿರಿಸ

Writer - ಪಿ ಸಾಯಿನಾಥ್

contributor

Editor - ಪಿ ಸಾಯಿನಾಥ್

contributor

Similar News