ಇಂದು ಕಾಸರಗೋಡಿಗೆ ಸಿಎಂ ಚಾಂಡಿ

Update: 2016-02-28 18:45 GMT

ಕಾಸರಗೋಡು, ಫೆ.28: ಕೇರಳ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಫೆ.29ರಂದು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಕಾಸರಗೋಡಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
 ಬಾರ್, ಸೋಲಾರ್ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಯವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷ ಧರಣಿ ನಡೆ ಸುತ್ತಿರುವ ಹಿನ್ನೆಲೆಯಲ್ಲಿ ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ.
  ಮುಖ್ಯಮಂತ್ರಿ ಬೆಳಗ್ಗೆ 9ಕ್ಕೆ ಚೆರ್ಕಳದಲ್ಲಿ ಕೃಷಿ ಇಲಾಖೆಯ ಸಾವಯವ ಸಂದೇಶ ಯಾತ್ರೆಗೆ ಚಾಲನೆ ನೀಡುವರು. 10 ಗಂಟೆಗೆ ಕಾಸರಗೋಡು ನಗರ ಸಭೆಯ ವನಿತಾ ಭವನದಲ್ಲಿ ನಡೆಯುವ ಐಕ್ಯರಂಗ ಸಮಾವೇಶದಲ್ಲಿ ಪಾಲ್ಗೊಳ್ಳುವರು. 11ಕ್ಕೆ ಪೊಯ್ನೆಚಿಯಲ್ಲಿ ಕೃಷಿ ಸೊಸೈಟಿಯನ್ನು ಉದ್ಘಾಟಿಸುವರು.
    ಮಧ್ಯಾಹ್ನ 1:30ಕ್ಕೆ ನಗರಸಭಾ ಸಭಾಂಗಣದಲ್ಲಿ ನಡೆಯುವ ಅಲ್ಪಸಂಖ್ಯಾತ ಶಿಕ್ಷಣ ರಾಜ್ಯ ಸಮ್ಮೇಳನದ ಪ್ರತಿನಿಧಿ ಸಮ್ಮೇಳನ ವನ್ನು ಮುಖ್ಯಮಂತ್ರಿ ಉದ್ಘಾಟಿಸುವರು. ಬಳಿಕ ಕಾಞಂಗಾಡ್‌ನಲ್ಲಿ ಸತ್ಯಸಾಯಿ ಟ್ರಸ್ಟ್ ಆಸ್ಪತ್ರೆಗೆ ಶಿಲಾನ್ಯಾಸ ನೆರವೇರಿಸುವರು. ಇದಲ್ಲದೆ ಇನ್ನಿತರ ಕಾರ್ಯಕ್ರಮಗಳಲ್ಲೂ ಮುಖ್ಯಮಂತ್ರಿ ಪಾಲ್ಗೊಳ್ಳಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News