ಬಾಂಬ್ ಬೆದರಿಕೆ: ರೈಲು ಸಂಚಾರ ಅಸ್ತವ್ಯಸ್ತ

Update: 2016-03-02 18:11 GMT

ಕಾಸರಗೋಡು, ಮಾ.2: ಬಾಂಬ್ ಬೆದರಿಕೆ ಕರೆಯ ಹಿನ್ನೆಲೆಯಲ್ಲಿ ಮಂಗಳೂರು- ಕಣ್ಣೂರು ನಡುವೆ ರೈಲು ಸಂಚಾರ ಅಸ್ತವ್ಯಸ್ತಗೊಂಡಿದ್ದು, ರೈಲುಗಳನ್ನು ವಿವಿಧ ನಿಲ್ದಾಣಗಳಲ್ಲಿ ನಿಲುಗಡೆಗೊಳಿಸಲಾಗಿದೆ. ಕಳ್ನಾಡ್-ತಳಂಗರೆ ರೈಲ್ವೆ ಹಳಿಯಲ್ಲಿ ಬಾಂಬ್ ಇಟ್ಟಿರುವುದಾಗಿ ಇಂದು ರಾತ್ರಿ ಕಾಸರಗೋಡು ಪೊಲೀಸ್ ಠಾಣೆಗೆ ಅನಾ ಮಿಕ ದೂರವಾಣಿ ಕರೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ರೈಲು ಹಳಿ ಮತ್ತು ನಿಲ್ದಾಣ ಮೊದಲಾದೆಡೆಗಳಲ್ಲಿ ತಪಾಸಣೆ ನಡೆಸುತ್ತಿದ್ದಾರೆ. ಇದಕ್ಕಾಗಿ ಮಂಗಳಾ ಎಕ್ಸ್ ಪ್ರೆಸ್, ಕಾಞಂಗಾಡ್-ಎಗ್ಮೋರ್ ಎಕ್ಸ್‌ಪ್ರೆಸ್, ಕೋಟಿಕುಳಂ-ಕಾಚಿಗುಡ ಎಕ್ಸ್‌ಪ್ರೆಸ್ ರೈಲುಗಳ ಸಂಚಾರವನ್ನು ಕಾಸರಗೋಡು ರೈಲು ನಿಲ್ದಾಣದಲ್ಲಿ ತಡೆಹಿಡಿಯಲಾಗಿದೆ. ಆದರೆ ಯಾವುದೇ ಸ್ಫೋಟಕಗಳು ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News