ಮಲ್ಯಗೆ ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯದ ಸಮನ್ಸ್ ಜಾರಿ
Update: 2016-03-11 15:35 IST
ಮುಂಬೈ, ಮಾ.11:ಅಕ್ರಮವಾಗಿ ಸಾಲ ಪಡೆದಿರುವ ವಿಚಾರಕ್ಕೆ ಸಂಬಂಧಿಸಿ ಉದ್ಯಮಿ ವಿಜಯ್ ಮಲ್ಯಗೆ ಜಾರಿ ನಿರ್ದೇಶನಾಲಯವು(ಇಡಿ) ಸಮನ್ಸ್ ಜಾರಿ ಮಾಡಿದೆ.
ಮಾ.18ರಂದು ಮುಂಬೈನ ಜಾರಿ ನಿರ್ದೇಶನಾಲಯದ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಇ-ಮೇಲ್ ಮೂಲಕ ಸಮನ್ಸ್ ಜಾರಿ ಮಾಡಲಾಗಿದೆ.
ಇದೇ ವೇಳೆ ಕಿಂಗ್ಫಿಷರ್ ಏರ್ ಲೈನ್ಸ್ ನ ಸೇವಾ ತೆರಿಗೆ ಪಾವತಿಗೆ ಬಾಕಿ ಉಳಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್ನ ಎರಡು ನೋಟಿಸ್ಗಳನ್ನು ಜಾರಿಗೊಳಿಸುವಲ್ಲಿ ವಿಫಲವಾದ ಸೇವಾ ತೆರಿಗೆ ಇಲಾಖೆಯನ್ನು ಮುಂಬೈ ಹೈಕೋರ್ಟ್ ಇಂದು ತರಾಟೆಗೆ ತೆಗೆದುಕೊಂಡಿದೆ.