ಶಿಶಿಕ್ಷು ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ

Update: 2016-03-12 18:17 GMT

ಮಂಗಳೂರು, ಮಾ.12: ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದಲ್ಲಿ ಶಿಶಿಕ್ಷು ತರಬೇತಿ ಪಡೆಯಲು 18ರಿಂದ 26 ವರ್ಷ ವಯೋಮಿತಿಯವರಿಂದ ಅರ್ಜಿ ಆಹ್ವಾನಿಸಲಾಗಿದೆ.

ಎಸೆಸೆಲ್ಸಿ ಅಥವಾ ಐ.ಟಿ.ಐ. ಪರೀಕ್ಷೆಯಲ್ಲಿ ಉತ್ತೀರ್ಣರಾದ ಆಸಕ್ತ ಅಭ್ಯರ್ಥಿಗಳು ಮಾ.15ರಿಂದ ಎಪ್ರಿಲ್ 12ರೊಳಗೆ ಅರ್ಜಿಯನ್ನು ವಿಭಾಗೀಯ ನಿಯಂತ್ರಣಾಧಿಕಾರಿ, ಕೆಎಸ್ಸಾಟಿಸಿರ್ ಮಂಗಳೂರು ವಿಭಾಗೀಯ ಕಚೇರಿ ಇಲ್ಲಿಗೆ ಸಲ್ಲಿಸಬೇಕು.
ಪರಿಶಿಷ್ಟ ಜಾತಿ-ಪಂಗಡ ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರದ ಮೂಲ ದಾಖಲೆಗಳೊಂದಿಗೆ ಎ.13ರಂದು ಬೆಳಗ್ಗೆ 10ಕ್ಕೆ ವಿಭಾಗೀಯ ನಿಯಂತ್ರಣಾಧಿಕಾರಿಯ ಕಚೇರಿ, ಕ.ರಾ.ರ.ಸಾ.ನಿಗಮ, ಮಂಗಳೂರು ಇಲ್ಲಿ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಪ್ರಕಟನೆೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News