ಛಾಯಾಗ್ರಾಹಕರಿಗೆ ಒಂದು ದಿನದ ಪ್ರೋಟೋಗ್ರಾಫಿ ಕಾರ್ಯಾಗಾರ
Update: 2016-03-16 19:12 IST
ಸೌತ್ ಕೆನರಾ ಫೋಟೋಗ್ರಾಫರ್ಸ್ ಎಸೋಸಿಯೇಶನ್ ದ.ಕ ಮತ್ತು ಉಡುಪಿ ಇದರ ವತಿಯಿಂದ ಛಾಯಾಗ್ರಾಹಕರಿಗೆ ಒಂದು ದಿನದ ಪ್ರೋಟೋಗ್ರಾಫಿ ಕಾರ್ಯಾಗಾರ ಮಂಗಳವಾರ ಪುತ್ತೂರಿನ ಪುರಭವನದಲ್ಲಿ ನಡೆಯಿತು.
ಸೌತ್ ಕೆನರಾ ಫೋಟೋಗ್ರಾಫರ್ಸ್ ಎಸೋಸಿಯೇಶನ್ ಅಧ್ಯಕ್ಷ ಜಗನ್ನಾಥ ಶೆಟ್ಟಿ ಉದ್ಘಾಟಿಸಿದರು. ಛಾಯಾಗ್ರಾಹಕ ಗುರುದತ್ ಕಾಮತ್ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು. ಪುತ್ತೂರು ವಲಯದ ಅಧ್ಯಕ್ಷ ಸುಧಾಕರ್ ಶೆಟ್ಟಿ ಮಿತ್ತೂರು, ಮಧು ಮಂಗಳೂರು ಮತ್ತಿತರರು ಉಪಸ್ಥಿತರಿದ್ದರು