×
Ad

ಕಾರ್ಕಳ: ಜೀವನ ಕೌಶಲ್ಯ ತರಬೇತಿ ಶಿಬಿರ

Update: 2016-03-19 17:47 IST

ಕಾರ್ಕಳ: ಬಜಗೋಳಿ ಸ.ಪ.ಪೂ.ಕಾಲೇಜಿನಲ್ಲಿ ಏಳು ದಿನಗಳ ಜೀವನ ಕೌಶಲ್ಯ ತರಬೇತಿ ಶಿಬಿರದ ಉದ್ಘಾಟನೆ ಶನಿವಾರ ನಡೆಯಿತು. ಬಜಗೋಳಿ ಜಿ.ಪಂ.ಸದಸ್ಯ ಉದಯ ಎಸ್.ಕೋಟ್ಯಾನ್ ಉದ್ಘಾಟಿಸಿ, ಪ್ರತಿಭಾವಂತನಾಗಿದ್ದರೂ ಜೀವನ ಕೌಶಲ್ಯದ ಕೊರತೆ ಇದ್ದಾಗ ಸಮಾಜದಲ್ಲಿ ಉನ್ನತ ಸ್ಥಾನ ಪಡೆಯುವಲ್ಲಿ ವಿಫಲನಾಗುತ್ತಾನೆ. ಸ್ಪರ್ಧಾಯುಗದಲ್ಲಿಯುವ ಇಂದಿನ ಯುವಜನತೆಯಲ್ಲಿ ಆತ್ಮವಿಶ್ವಾಸ ಹೆಚ್ಚಿಸಿ, ಸ್ಪರ್ಧಾತ್ಮಕ ಮನೋಭಾವನೆಯನ್ನು ಬೆಳೆಸುವುದರೊಂದಿಗೆ ಉತ್ತಮ ನಡವಳಿಕೆ, ಸೃಜನಶೀಲತೆಗಳನ್ನು ಬೆಳೆಸುವಲ್ಲಿ ಇಂತಹ ತರಬೇತಿಗಳು ಅವಶ್ಯ ಎಂದರು. ಮುಡಾರು ಗ್ರಾ.ಪಂ.ಅಧ್ಯಕ್ಷೆ ಗೀತಾ ಪಾಟ್ಕರ್ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಳ ಗಣೇಶ ಬರ್ಲಾಯ, ಮುಡಾರು ತಾ.ಪಂ.ಸದಸ್ಯ ಸುಧಾಕರ ಶೆಟ್ಟಿ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಮಹಾವೀರ ಜೈನ್, ಸಂಪನ್ಮೂಲ ವ್ಯಕ್ತಿ ಆಲ್ವಿನ್ ದಾಂತಿ ಉಪಸ್ಥಿತರಿದ್ದರು. ನೆಹರು ಯುವ ಕೇಂದ್ರ ಉಡುಪಿ, ರಾಷ್ಟ್ರೀಯ ಯೋಜನೆ ಘಟಕ, ಬಜಗೋಳಿ ಸ.ಪ.ಪೂ.ಕಾಲೇಜು ಹಾಗೂ ತಾಲೂಕು ಯುವಜನ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಈ ಶಿಬಿರ ನಡೆಯಲಿದೆ. ಉಪನ್ಯಾಸಕ ವಿ.ಪಿ. ವೀರೇಂದ್ರಾ ಸ್ವಾಗತಿಸಿದರು. ಕೀರ್ತನಾ ಕಾರ್ಯಕ್ರಮ ನಿರೂಪಿಸಿದರು. ನೆಹರು ಯುವ ಕೇಂದ್ರದ ಸಹಾಯಕ ಸಮನ್ವಯಾಧಿಕಾರಿ ವಿಷ್ಣುಮೂರ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರವೀಣ್ ಕುಮಾರ್ ಶೆಟ್ಟಿ ವಂದಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News