ಕಾನೂನು ಸಾಕ್ಷರತಾ ರಥ ಅಭಿಯಾನಕ್ಕೆ ಚಾಲನೆ
ಪುತ್ತೂರು, ಮಾ.19: ಸಂಸ್ಥೆಗಳಲ್ಲಿ ಕಾರ್ಮಿಕರು ಮತ್ತು ಆಡಳಿತ ಮಂಡಳಿಯು ಹೊಂದಾಣಿಕೆಯಿಂದ ಮುಂದುವರಿದಾಗ ಮಾತ್ರ ಆ ಸಂಸ್ಥೆ ಏಳಿಗೆಯನ್ನು ಕಾಣಲು ಸಾಧ್ಯ ಎಂದು ಹೆಚ್ಚುವರಿ ಹಿರಿಯ ವ್ಯವಹಾ ರಿಕ ನ್ಯಾಯಾಧೀಶ ವಿ. ನಾಗರಾಜ್ ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು, ತಾಲೂಕು ಕಾನೂನು ಸೇವೆ ಗಳ ಸಮಿತಿ, ವಕೀಲರ ಸಂಘ ಪುತ್ತೂರು ಆಶ್ರಯದಲ್ಲಿ ವಿವಿಧ ಇಲಾಖೆಗಳ ಹಾಗೂ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆಯ ಸಭಾಂಗಣದಲ್ಲಿ ನಡೆದ ಕಾನೂನು ಸಾಕ್ಷರತಾ ರಥ ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಧಾನ ಸಿವಿಲ್ ನ್ಯಾಯಾಧೀಶ ಇಬ್ರಾಹೀಂ ಎಂ. ಮುಜಾವರ್ ಮಾತ ನಾಡಿ, ದೈನಂದಿನ ವ್ಯವಹಾರದಲ್ಲಿ ಬಳಕೆಯಾ ಗುವ ಕಾನೂನನ್ನು ಪ್ರತಿಯೊಬ್ಬರೂ ತಿಳಿದಿರ ಬೇಕು. ಕಾನೂನು ತಿಳಿದಿದ್ದರೆ ಧೈರ್ಯದ ವ್ಯವಹಾರ ನಡೆಸಲು ನೆಮ್ಮದಿಯ ಬದುಕು ಕಂಡುಕೊಳ್ಳಲು ಸಾಧ್ಯವಾಗುತ್ತದೆ. ಕಾನೂ ನನ್ನು ನಾವು ಗೌರವಿಸಿದರೆ ಅದು ನಮ್ಮನ್ನು ಗೌರವಿಸುತ್ತದೆ ಎಂದು ಹೇಳಿದರು. ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಕುಂಬ್ರ ದುರ್ಗಾಪ್ರಸಾದ್ ರೈ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ನ್ಯಾಯವಾದಿ ಮನೋಹರ ಎ. ಮತ್ತು ಹಿರಿಯ ಕಾರ್ಮಿಕ ನಿರೀಕ್ಷಕ ರಾಮಚಂದ್ರ ಎಚ್. ಭಾಗವಹಿಸಿದ್ದರು. ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆಯ ಅಸಿಸ್ಟೆಂಟ್ ಜನ ರಲ್ ಮ್ಯಾನೇಜರ್ ಫ್ರಾನ್ಸಿಸ್ ಡಿಸೋಜ ಶುಭಹಾರೈಸಿದರು. ವೇದಿಕೆಯಲ್ಲಿ ವಕೀಲರ ಸಂಘದ ಜತೆ ಕಾರ್ಯದರ್ಶಿ ರಮಾನಂದ ಕೆ., ಸಂಯೋಜಕ ವಕೀಲ ಶ್ರೀಹರಿ, ನಾರಾಯಣ ರೈ ಕುಕ್ಕುವಳ್ಳಿ ಉಪಸ್ಥಿತರಿದ್ದರು. ಸಂಯೋಜಕ ವಕೀಲ ಮಹಾಬಲ ಗೌಡ ಸ್ವಾಗತಿಸಿ, ವಕೀಲರ ಸಂಘದ ಕೋಶಾಧಿಕಾರಿ ಮೋನಪ್ಪಎಂ. ವಂದಿಸಿದರು. ಕಾರ್ಮಿಕ ಇಲಾಖೆಯ ಚಿದಾನಂದ ಕಾಮತ್ ಕಾಸರಗೋಡು ಕಾರ್ಯಕ್ರಮ ನಿರೂಪಿಸಿದರು.