ಕಲಘಟಗಿಯ ಯುವಕ ಮುಂಡಗೋಡದಲ್ಲಿ ಆತ್ಮಹತ್ಯೆಗೆ ಯತ್ನ

Update: 2016-03-20 06:13 GMT

ಮುಂಡಗೋಡ, ಮಾ.20: ಕಲಘಟಗಿಯ ಯುವಕನೋರ್ವ ಮುಂಡಗೋಡದಲ್ಲಿ ವಿಷ ಕುಡಿದು ಆತ್ಮಹತ್ಯೆಗೆ ಪ್ರಯತ್ನಪಟ್ಟು  ಅಸ್ವಸ್ಥನಾಗಿದ್ದ ಆತನನ್ನು ಸಾರ್ವಜನಿಕರು ಆಸ್ಪತ್ರೆಗೆ ಸೇರಿಸಿದ ಘಟನೆ ತಾಲೂಕಿನ ಹುಬ್ಬಳ್ಳಿ ಶಿರಸಿ ರಸ್ತೆಯ ಕರಗಿನಕೊಪ್ಪ ಗ್ರಾಮದ ಹತ್ತಿರ ನಡೆದಿದೆ.

ಆತ್ಮಹತ್ಯೆಗೆ ಪ್ರಯತ್ನ ಪಟ್ಟ ಯುವಕನನ್ನು ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ನೆಲ್ಲಹರವಿ ಗ್ರಾಮದ ರಮೇಶ ಹನಮಂತಪ್ಪ ಮಂಡರ(20) ಎಂದು ಗುರುತಿಸಲಾಗಿದೆ.

ಮನೆಯಲ್ಲಿ  ಗಲಾಟೆ ಮಾಡಿಕೊಂಡು ಮುಂಡಗೋಡಗೆ ಬಂದು ವಿಷ ಸೇವಿಸಿ ಅಸ್ವಸ್ಥನಾಗಿದ್ದವನನ್ನು ಸಾರ್ವಜನಿಕರು ಗಮನಿಸಿ ಮುಂಡಗೋಡ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆನೀಡಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸಗೆ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News