ಬರಗಾಲ: ಸಚಿವರ ಭೋಜನಕೂಟ ರದ್ದು
Update: 2016-03-21 23:41 IST
ಬೆಂಗಳೂರು, ಮಾ.21: ರಾಜ್ಯದಲ್ಲಿ ತೀವ್ರ ಬರಗಾಲದ ಪರಿಸ್ಥಿತಿಯಿರುವುದರಿಂದ ಬಜೆಟ್ ಅಧಿವೇಶನದ ಸಂದರ್ಭದಲ್ಲಿ ಶಾಸಕರು ಹಾಗೂ ಮಾಧ್ಯಮ ಪ್ರತಿನಿಧಿಗಳಿಗಾಗಿ ಆಯೋಜಿಸುವ ಭೋಜನಕೂಟಗಳನ್ನು ರದ್ದುಪಡಿಸುವಂತೆ ಎಲ್ಲ ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ ಎನ್ನಲಾಗಿದೆ.