ಮಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಮಿಕ ವಿಭಾಗದ ಕಾರ್ಯದರ್ಶಿಯಾಗಿ ಮೊಹಮ್ಮದ್ ರಫೀ ನೇಮಕ
Update: 2016-03-22 18:37 IST
ಮಂಗಳೂರು,ಮಾ.22: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಮಿಕ ವಿಭಾಗದ ಕಾರ್ಯದರ್ಶಿಯಾಗಿ ಮೊಹಮ್ಮದ್ ರಫೀ ಅವರು ನೇಮಕವಾಗಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರ ಶಿಫಾರಸ್ಸಿನಂತೆ ಕೆಪಿಸಿಸಿ ಕಾರ್ಮಿಕ ವಿಭಾಗದ ಅಧ್ಯಕ್ಷ ಎಸ್.ಎಸ್. ಪ್ರಕಾಶಂ ಮೊಹಮ್ಮದ್ ರಫೀ ಅವರನ್ನು ಕಾರ್ಯದರ್ಶಿಯಾಗಿ ನೇಮಕಗೊಳಿಸಿದ್ದಾರೆ.