ಪುತ್ತೂರು : ಪಾಕ್ ಪರ ವಾಟ್ಸಪ್ ಸಂದೇಶ ಇಬ್ಬರ ವಿದ್ಯಾರ್ಥಿಗಳ ಮೇಲೆ ಕೇಸು

Update: 2016-03-24 14:12 GMT

  ಪುತ್ತೂರು : ಕೆಲ ದಿನಗಳ ಹಿಂದೆಯಷ್ಟೇ ಭಾರತ ಮತ್ತು ಪಾಕಿಸ್ಥಾನ ತಂಡಗಳ ನಡುವೆ ನಡೆದಿದ್ದ 20;20 ವಿಶ್ವಕಪ್ ಕ್ರಿಕೆಟ್ ಪಂದ್ಯಾಟದ ವೇಳೆ ಪಾಕಿಸ್ಥಾನ ಪರ ಘೋಷಣೆಗಳನ್ನೊಳಗೊಂಡ ಪಾಟ್ಸ್‌ಪ್ ಸಂದೇಶ ರವಾನಿಸಿರುವ ಆರೋಪದಲ್ಲಿ ಪುತ್ತೂರಿನ ಇಂಡಸ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ತಾಲೂಕು ದಂಡಾಧಿಕಾರಿಗಳ ಮುಂದೆ ಹಾಜರುಪಡಿಸಿದ್ದಾರೆ.

   ವಿಶ್ವಹಿಂದೂ ಪರಿಷತ್‌ನ ಪುತ್ತೂರು ನಗರ ಅಧ್ಯಕ್ಷ ಕೃಷ್ಣಪ್ರಸಾದ್ ಬೆಟ್ಟ ಎಂಬವರು ನೀಡಿರುವ ದೂರಿನ ಹಿನ್ನಲೆಯಲ್ಲಿ ಪುತ್ತೂರು ನಗರ ಪೊಲೀಸರು ಆರೋಪಿ ವಿದ್ಯಾರ್ಥಿಗಳಾದ ಅಬ್ದುಲ್‌ರಶೀದ್ ಮತ್ತು ಸಫಾನ್ ಎಂಬವರ ವಿರುದ್ಧ ಸೆಕ್ಷನ್ 107 ನಡಿ ಪ್ರಕರಣ ದಾಖಲಿಸಿಕೊಂಡು ವಶಕ್ಕೆ ತೆಗೆದುಕೊಂಡು, ಬಳಿಕ ವಿಚಾರಣೆ ನಡೆಸಿ ತಾಲೂಕು ದಂಡಾಧಿಕಾರಿಗಳ ಮುಂದೆ ಹಾಜರುಪಡಿಸಿದ್ದಾರೆ, ತಾಲೂಕು ದಂಡಾಧಿಕಾರಿಗಳು ಮುಚ್ಚಳಿಕೆ ಬರೆಸಿಕೊಂಡು ವಿದ್ಯಾರ್ಥಿಗಳನ್ನು ಬಿಡುಗಡೆಗೊಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News