ಅರ್ಜಿ ಆಹ್ವಾನ

Update: 2016-04-02 18:58 GMT

ಉಡುಪಿ, ಎ.2: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ, ಹೈನುಗಾರಿಕೆ, ಉದ್ಯಮಶೀಲತಾ ಅಭಿವೃದ್ಧಿ, ಮೈಕ್ರೋ ಕ್ರೆಡಿಟ್ (ಕಿರುಸಾಲ), ಭೂಒಡೆತನ, ಗಂಗಾ ಕಲ್ಯಾಣ ವೈಯಕ್ತಿಕ ನೀರಾವರಿ ಕೊಳವೆ ಬಾವಿ/ತೆರೆದ ಬಾವಿ/ಏತ ನೀರಾವರಿ ಯೋಜನೆ ಗಳ ಮೂಲಕ ಆರ್ಥಿಕ ನೆರವು ಪಡೆಯಲು ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳವರು ಮೇಲ್ಕಂಡ ಯೋಜನೆಗಳ ಮಾಹಿತಿ ಹಾಗೂ ಅರ್ಜಿಗಳನ್ನು ನಿಗಮದ ವೆಬ್‌ಸೈಟ್ ಡಿಡಿಡಿ.ಚ್ಟ್ಞಠಿ.ಜಟ.ಜ್ಞಿ/ಞಠಿಛ್ಚ್ಝ/ಜಛಿ/ಟಞಛಿ.ಟ್ಡ- ಇಲ್ಲಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧ್ದಿ ನಿಗಮ, ೞಬಿ   ೞಬ್ಲಾಕ್, 2ನೇ ಮಹಡಿ, ಕೊಠಡಿ ಸಂಖ್ಯೆ 302, ಜಿಲ್ಲಾ ಕಚೇರಿಗಳ ಸಂಕೀರ್ಣ, ರಜತಾದ್ರಿ ಮಣಿಪಾಲ-576104 ಇಲ್ಲಿಂದ ಉಚಿತವಾಗಿ ಪಡೆಯಬಹುದು. ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಎ.30ರೊಳಗೆ ಖುದ್ದಾಗಿ ಅಥವಾ ಅಂಚೆಯ ಮೂಲಕ ಸಲ್ಲಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News