ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ
Update: 2016-04-02 19:00 GMT
ಉಡುಪಿ, ಎ.2: ಕೃಷಿ ವಿಜ್ಞಾನ ಕೇಂದ್ರ ಹಾಗೂ ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರ ಬ್ರಹ್ಮಾವರ ಇವರ ಸಂಯುಕ್ತ ಆಶ್ರಯದಲ್ಲಿ ಎ.5ರಂದು ಬೆಳಗ್ಗೆ 10 ಗಂಟೆಗೆ ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೇಂದ್ರ ಕೃಷಿ ಮಂತ್ರಾಲಯದ ನಿರ್ದೇಶನದ ಮೇರೆಗೆ 2016ರ ಮುಂಗಾರು ಹಂಗಾಮಿನ ಬೆಳೆ ವಿಮೆಯನ್ನು ಅನುಷ್ಠಾನಗೊಳಿಸಲು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಉಡುಪಿ ಜಿಲ್ಲೆಯ ರೈತರಿಗೆ, ವಿಸ್ತರಣಾ ಕಾರ್ಯಕರ್ತರಿಗೆ, ವಿವಿಧ ಕೃಷಿ ಆಧಾರಿತ ಸಹಕಾರಿ ಸಂಘಗಳಿಂದ ಬರುವಂತಹ ರೈತರು ಮತ್ತು ರೈತ ಪ್ರತಿನಿಧಿಗಳಿಗೆ ಬೆಳೆ ವಿಮೆ ಬಗ್ಗೆ ಜಾಗೃತಿ ಮೂಡಿಸಲು ಒಂದು ದಿನದ ರೈತ ಜಾಗೃತಿ ಮತ್ತು ರೈತ ಜಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ.
ಆಸಕ್ತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು ಎಂದು ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಪ್ರಕಟನೆ ತಿಳಿಸಿದೆ.