ಕೊಣಾಜೆ: ಶಿಕ್ಷಣವಿದ್ದರೆ ಮಾತ್ರ ಉತ್ತಮ ಬದುಕು ಸಾಧ್ಯ: ಮಮತಾ ಗಟ್ಟಿ

Update: 2016-04-05 15:42 GMT

ಇರಾ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಶೂ ವಿತರಣೆ ಕಾರ್ಯಕ್ರಮವು ಮಂಗಳವಾರ ನಡೆಯಿತು.

ಕೊಣಾಜೆ: ಇಂದು ಪ್ರತಿಯೊಬ್ಬರೂ ಶಿಕ್ಷಣ ಪಡೆಯುವಂತಾಗಲು ಸರಕಾರ ಹಲವಾರು ಸೌಲಭ್ಯಗಳನ್ನು ಒದಗಿಸಿಕೊಟ್ಟಿದ್ದು ಇದರ ಸದುಪಯೋಗವನ್ನು ಪ್ರತಿಯೊಬ್ಬರೂ ಬಳಸಿಕೊಳ್ಳಬೇಕು. ಶಿಕ್ಷಣ ಇದ್ದರೆ ಮಾತ್ರ ನಾವು ಉತ್ತಮ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯ ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಮಮತಾ ಗಟ್ಟಿ ಅವರು ಅಭಿಪ್ರಾಯ ಪಟ್ಟರು.
 ಅವರು ಇರಾ-ಪರಪ್ಪು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಸರಕಾರದ ವತಿಯಿಂದ ದೊರೆತ ಶೂ ವಿತರಣೆ ಹಾಗೂ ಶಾಲಾ ಮಕ್ಕಳು ರಚಿಸಿದ ಹಸ್ತ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.
 ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಇರಾ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ, ತಾಲೂಕು ಮಪಂಚಾಯಿತಿ ಸದಸ್ಯರಾದ ಚಂದ್ರಹಾಸ ಕರ್ಕೇರ, ಬಾಳೆಪುಣಿ ಕೈರಂಗಳ ತಾಲೂಕು ಪಂಚಾಯಿತಿ ಸದಸ್ಯರಾದ ಹೈದರ್ ಕೈರಂಗಳ ಅವರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News