ಹದಿಮೂರನೆ ದಿನಕ್ಕೆ ಕಾಲಿಟ್ಟ ಪಿಯು ಉಪನ್ಯಾಸಕರ ಮುಷ್ಕರ

Update: 2016-04-13 06:57 GMT

 ಬೆಂಗಳೂರು, ಎ13: ಮೌಲ್ಯಮಾಪನ ಬಹಿಷ್ಕರಿಸಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರು ನಡೆಸುತ್ತಿರುವ ಮುಷ್ಕರ ಹದಿಮೂರನೆ ದಿನಕ್ಕೆ ಕಾಲಿರಿಸಿದೆ. ಉಪನ್ಯಾಸಕರು ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
ಭಜನೆ, ಯೋಗ, ಪ್ರಾಣಾಯಾಮ  ನಡೆಸುತ್ತಿರುವ ಉಪನ್ಯಾಸಕರು ಇಂದಿನಿಂದ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ. ವೇತನ ತಾರತಮ್ಯವನ್ನು ಸರಿಪಡಿಸುವಂತೆ ಆಗ್ರಹಿಸಿ ಚಳವಳಿ ನಡಸುತ್ತಿರುವ ಉಪನ್ಯಾಸಕರ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ ಸರಕಾರ ಗಮನ ಹರಿಸಿಲ್ಲ. ಫ್ರೀಡಂ ಪಾರ್ಕ್ ನಲ್ಲಿ  50 ಮಂದಿ ಉಪನ್ಯಾಸಕರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News