‘ಬಿಎಸ್‌ವೈಗೆ ಐಷಾರಾಮಿ ಕಾರು ಉಡುಗೊರೆ’

Update: 2016-04-15 17:20 GMT

ಬೆಂಗಳೂರು, ಎ.15: ಬರಪೀಡಿತ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲು ಅನುಕೂಲವಾಗು ವಂತೆ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಗೆ ಮಾಜಿ ಸಚಿವ ಮುರುಗೇಶ್ ನಿರಾಣಿ ಸುಮಾರು ಒಂದು ಕೋಟಿ ರೂ.ವೌಲ್ಯದ ಐಷಾರಾಮಿ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ.
ಬರಪರಿಸ್ಥಿತಿ ಅಧ್ಯಯನ ಹಾಗೂ ಪಕ್ಷ ಸಂಘಟನೆಯ ಉದ್ದೇಶದಿಂದ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಬೇಕಾಗಿರುವ ಹಿನ್ನೆಲೆಯಲ್ಲಿ ಉತ್ತಮ ಹಾಗೂ ಭದ್ರತೆಯ ದೃಷ್ಟಿಯಿಂದ ಮುರುಗೇಶ್ ನಿರಾಣಿ ಕಾರನ್ನು ನೀಡಿದ್ದಾರೆ, ಅದರಲ್ಲಿ ತಪ್ಪೇನಿದೆ ಎಂದು ಯಡಿಯೂರಪ್ಪ ಸಮರ್ಥಿಸಿಕೊಂಡಿದ್ದಾರೆ.
ಶನಿವಾರ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಕೈಗೊಂಡಿರುವ ಬರ ಅಧ್ಯಯನ ಪ್ರವಾಸಕ್ಕೆ ತನ್ನ ತಕರಾರಿಲ್ಲ. ಆದರೆ, ಅವರ ಸಚಿವ ಸಂಪುಟದ ಸದಸ್ಯರು ಎಷ್ಟು ಜಿಲ್ಲೆಗಳಲ್ಲಿ ಬರಪರಿಹಾರಕ್ಕೆ ಸಂಬಂಧಿಸಿದ ಸಭೆಗಳನ್ನು ನಡೆಸಿದ್ದಾರೆ ಎಂಬುದರ ಬಗ್ಗೆ ಮಾಹಿತಿಯನ್ನು ಒದಗಿಸಲಿ ಎಂದರು.
ಮುಖ್ಯಮಂತ್ರಿ ವಿರುದ್ಧ ಹಲವು ಹಗರಣಗಳು ಮತ್ತು ಸ್ವಜನ ಪಕ್ಷಪಾತದ ಆರೋಪಗಳು ಪ್ರಬಲವಾಗಿ ಕೇಳಿಬಂದಿರುವ ಹಿನ್ನೆಲೆಯಲ್ಲಿ ಅದರಿಂದ ತಪ್ಪಿಸಿಕೊಳ್ಳಲು ಹಾಗೂ ಜನರ ಗಮನವನ್ನು ಬೇರೆ ಕಡೆ ಸೆಳೆಯಲು ಬರ ಅಧ್ಯಯನ ಪ್ರವಾಸದ ಮೊರೆ ಹೋಗಿದ್ದಾರೆ ಎಂದು ಯಡಿಯೂರಪ್ಪ ಟೀಕಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News