ಯುವಕರಲ್ಲಿ ಓದಿನ ಅಭಿರುಚಿ ಬೆಳೆಸಲು ಕಸಾಪ ಬದ್ಧ: ಮನು ಬಳಿಗಾರ್

Update: 2016-04-19 18:35 GMT

ಬೆಂಗಳೂರು, ಎ. 19: ಯುವಕರಲ್ಲಿ ಓದಿನ ಅಭಿರುಚಿಯನ್ನು ಬೆಳೆಸುವ ಮೂಲಕ ಕ್ಷೀಣಿಸುತ್ತಿರುವ ಕನ್ನಡ ಸಾಹಿತ್ಯವನ್ನು ರಕ್ಷಣೆ ಮಾಡಬೇಕಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ಅಭಿಪ್ರಾಯಪಟ್ಟಿದ್ದಾರೆ.

 ಮಂಗಳವಾರ ನಗರದ ನಯನ ಸಭಾಂಗಣದಲ್ಲಿ ಜನದನಿ ಬಳಗ ಆಯೋಜಿಸಿದ್ದ ಲೇಖಕ ಡಾ.ಕಾ.ವೆಂ.ಶ್ರೀನಿವಾಸಮೂರ್ತಿ ರಚಿಸಿರುವ ‘ಗೀತ ಮಾಧುರಿ ಮತ್ತು ಸಾಹಿತ್ಯ ಯಾನ’ ಎಂಬ ಎರಡು ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಅಂತರ್ಜಾಲ ಮತ್ತು ಆಂಗ್ಲ ಮಾಧ್ಯಮದ ಹಾವಳಿಯಿಂದ ಕನ್ನಡ ಸಾಹಿತ್ಯ ಬೆಳವಣಿಗೆಯಲ್ಲಿ ಕುಂಠಿತವಾಗಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News