×
Ad

ಸಮಝೋತಾ ಸ್ಫೋಟ ಪ್ರಕರಣ: ಕಪುರೋಹಿತ ಅರ್ಜಿ ಸರ್ವೋಚ್ಚ ನ್ಯಾಯಾಲಯದಲ್ಲಿ ತಿರಸ್ಕೃತ

Update: 2016-04-29 19:59 IST

ಹೊಸದಿಲ್ಲಿ,ಎ.29: ವಿಚಾರಣಾ ನ್ಯಾಯಾಲಯದಲ್ಲಿ ತನ್ನ ವಿರುದ್ಧ ಆರೋಪಗಳನ್ನು ರೂಪಿಸಿರುವುದನ್ನು ಪ್ರಶ್ನಿಸಿರುವ ಮಾಲೆಗಾಂವ ಸ್ಫೋಟ ಪ್ರಕರಣದ ಆರೋಪಿ ಲೆಕಪ್ರಸಾದ ಶ್ರೀಕಾಂತ ಪುರೋಹಿತ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಲು ಶುಕ್ರವಾರ ನಿರಾಕರಿಸಿದ ಸರ್ವೋಚ್ಚ ನ್ಯಾಯಾಲಯವು, ಈ ವಿಷಯದಲ್ಲಿ ಉಚ್ಚ ನ್ಯಾಯಾಲಯವನ್ನು ಸಂಪರ್ಕಿಸುವಂತೆ ಸೂಚಿಸಿತು.

ಸಮಝೋತಾ ಎಕ್ಸಪ್ರೆಸ್ ಸ್ಫೋಟ ಪ್ರಕರಣದಲ್ಲಿ ಪುರೋಹಿತ ಭಾಗಿಯಾಗಿಲ್ಲ ಮತ್ತು ಆತನ ವಿರುದ್ಧ ಯಾವುದೇ ಸಾಕ್ಷಾಧಾರ ಲಭ್ಯವಾಗಿಲ್ಲ ಎಂದು ಎನ್‌ಐಎ ವರಿಷ್ಠ ಶರದ್ ಕುಮಾರ ಅವರು ಕಳೆದ ವಾರ ಹೇಳಿದ್ದರು. ಸಮರೆತಾ ಮತ್ತು ಮಾಲೆಗಾಂವ ಸ್ಫೋಟ ಪ್ರಕರಣಗಳಲ್ಲಿ ಪ್ರಮುಖ ಆರೋಪಿಗಳಲ್ಲೋರ್ವನಾಗಿರುವ ಪುರೋಹಿತ ಕಳೆದ ಏಳು ವರ್ಷಗಳಿಂದಲೂ ಜೈಲಿನಲ್ಲಿದ್ದಾನೆ.

ತನ್ನ ಸೇನಾ ಗೌರವವನ್ನು ಮರಳಿಸುವಂತೆ ಎ.4ರಂದು ರಕ್ಷಣಾ ಸಚಿವ ಮನೋಹರ ಪಾರ್ರಿಕರ್ ಅವರಿಗೆ ಪತ್ರವನ್ನು ಬರೆದಿದ್ದ ಆತ,ತನ್ನನ್ನು ಪ್ರಕರಣದಲ್ಲಿ ಸುಳ್ಳೇ ಸಿಲುಕಿಸಲಾಗಿದೆ ಎಂದು ತಿಳಿಸಿದ್ದ. 2007,ಫೆ.18ರಂದು ಹರ್ಯಾಣದ ಪಾಣಿಪತ್ ಬಳಿ ಸಮರೆತಾ ಎಕ್ಸಪ್ರೆಸ್ ರೈಲಿನಲ್ಲಿ ಬಾಂಬ್ ಸ್ಫೋಟಿಸಿ,68 ಜನರು ಸಾವನ್ನಪ್ಪಿದ್ದರು ಮತ್ತು 12 ಪ್ರಯಾಣಿಕರು ಗಾಯಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News