×
Ad

ಮೃತ ಮುಹಮ್ಮದ್ ಸೈಫಾನ್ ಮನೆಗೆ ಯು.ಟಿ. ಖಾದರ್ ಭೇಟಿ

Update: 2016-05-01 11:15 IST

ಮಂಗಳೂರು, ಮೇ 1: ಉಳ್ಳಾಲ ದರ್ಗಾ ಭೇಟಿ ನೀಡಿದ ಸಚಿವ ಯು.ಟಿ. ಖಾದರ್ ನಂತರ ಉಳ್ಳಾಲದಲ್ಲಿ ದುಷ್ಕರ್ಮಿಗಳ ತಲವಾರು ದಾಳಿಗೆ ಒಳಗಾಗಿ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮೃತಪಟ್ಟ  ಮುಹಮ್ಮದ್ ಸೈಫಾನ್ ಮನೆಗೆ ಭೇಟಿ ನೀಡಿ, ಸಾಂತ್ವನ ಹೇಳಿದರು.

ಈ ಸಂದರ್ಭ ಮಾತನಾಡಿದ ಅವರು ಪರಿಸರದಲ್ಲಿ ಶಾಂತಿ ಕಾಪಾಡಿಕೊಳ್ಳಲು ಮನವಿ ಮಾಡಿದರು. ಮೃತ ಕುಟುಂಬಕ್ಕೆ ಎಲ್ಲಾ ರೀತಿಯಲ್ಲಿ ಪರಿಹಾರ ನೀಡುವ ಕ್ರಮ ಕೈಗೊಳ್ಳುವ ಬಗ್ಗೆ ತಿಳಿಸಿದರು. ಈ ಸಂದರ್ಭ ಸ್ಥಳೀಯ ಹಲವರು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News