ಇನ್ನೂ ಎರಡು ವರ್ಷ ನಾನೇ ಸಿಎಂ: ಸಿದ್ದರಾಮಯ್ಯ

Update: 2016-05-01 12:52 GMT

ಬೆಂಗಳೂರು, ಮೇ 1: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡಲಾಗುತ್ತದೆ ಎಂಬುದು ಕೇವಲ ಗಾಳಿ ಸುದ್ದಿಯಷ್ಟೇ. ಇನ್ನೂ ಎರಡು ವರ್ಷಗಳ ಕಾಲ ನಾನೇ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದಿಲ್ಲಿ ಸ್ಪಷ್ಟನೆ ನೀಡಿದ್ದಾರೆ.

ರವಿವಾರ ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಮಾಜಿ ಸಚಿವ ಪ್ರೊ.ಎ.ಲಕ್ಷ್ಮೀಸಾಗರ್ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಮೂಢನಂಬಿಕೆಗಳು ವೈಜ್ಞಾನಿಕ ಮನೋಭಾವಕ್ಕೆ ಮಾರಕವೇ’ ಎಂಬ ವಿಷಯದ ಮೇಲೆ ಮಾತನಾಡಿದ ಅವರು, ಚಾಮರಾಜನಗರ ಜಿಲ್ಲೆಗೆ ಹೋದರೆ ಅಧಿಕಾರ ಕಳೆದುಕೊಳ್ಳುತ್ತಾರೆಂಬ ಮೂಢನಂಬಿಕೆಯಿದೆ. ಆದರೆ, ನಾನು ಮುಖ್ಯಮಂತ್ರಿ ಆದ ಮೇಲೆ ಆರು ಬಾರಿ ಚಾಮರಾಜನಗರ ಜಿಲ್ಲೆಗೆ ಹೋಗಿ ಬಂದು ಇನ್ನೂ ಅಧಿಕಾರದಲ್ಲಿದ್ದೇನೆ ಎಂದರು.

ಅಧಿಕಾರ ಕಳೆದುಕೊಳ್ಳುತ್ತಾರೆಂಬುದು ಕೇವಲ ಭೀತಿ. ಮಾತ್ರವಲ್ಲ ಅದೊಂದು ರೀತಿಯ ಮೂಢನಂಬಿಕೆ ಎಂದ ಅವರು, ಮುಖ್ಯಮಂತ್ರಿ ಬದಲಾವಣೆ ಎಂಬುದು ಕೇವಲ ಗಾಳಿ ಸುದ್ದಿ. ಮುಖ್ಯಮಂತ್ರಿ ಬದಲಾವಣೆಯ ಪ್ರಶ್ನೆಯೇ ಉದ್ಭವಿಸಿಲ್ಲ ಎಂದು ವಿವರಣೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News