ಹೆಬ್ರಿ: ಪಶ್ಚಿಮಘಟ್ಟದ ಸಂರಕ್ಷಣೆಗಾಗಿ ಪರಿಸರ ಜಾಗೃತಿ ಜಾಥಾ

Update: 2016-05-03 18:48 GMT

ಹೆಬ್ರಿ, ಮೇ 3: ರಾಜ್ಯ ಅರಣ್ಯ ಮತ್ತು ಪರಿಸರ, ಜೀವಿಶಾಸ್ತ್ರ ಇಲಾಖೆ, ವಿಜ್ಞ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞ್ಞಾನ ಪರಿಷತ್ತಿನ ಉಡುಪಿ ಜಿಲ್ಲಾ ಸಮಿತಿಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಕಳ ರೋಟರಿ ಕ್ಲಬ್, ಹೆಬ್ರಿ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಇಕೋಕ್ಲಬ್, ಹೆಬ್ರಿ ಗ್ರಾಪಂ, ಹೆಬ್ರಿ ಜೇಸಿಐ ಸಂಸ್ಥೆಗಳ ವತಿಯಿಂದ ಮಂಗಳವಾರ ಹೆಬ್ರಿಯಲ್ಲಿ ಪಶ್ಚಿಮ ಘಟ್ಟ ಪ್ರದೇಶ ಸಂರಕ್ಷಣೆ ಕುರಿತು ಪರಿಸರ ಜಾಗೃತಿ ಆಂದೋಲನ ನಡೆಯಿತು.
ಶಾಲೆಯ ಆವರಣದಿಂದ ಹೆಬ್ರಿಮೂಲಕ ಬೈಸಿಕಲ್‌ನಲ್ಲಿ ಸಾಗಿದ ವಿದ್ಯಾ ರ್ಥಿಗಳು ಹಾಗೂ ಪರಿಸರಾಸಕ್ತರು ಪಶ್ಚಿಮ ಘಟ್ಟ ಸಂರಕ್ಷಣೆ ಮತ್ತು ಪರಿಸರ ಸಂರಕ್ಷಣೆ ಕುರಿತು ಫಲಕಗಳೊಂದಿಗೆ ಪರಿಸರ ಪರ ವಾದ ಘೋಷಣೆಗಳನ್ನು ಕೂಗುತ್ತಾ ಸಾಗಿದರು.
ಪರಿಸರ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಸೋಮೇಶ್ವರ ವನ್ಯಜೀವಿ ವಲಯಾಧಿಕಾರಿ ಬಿ.ಸುಬ್ಬಯ್ಯ ನಾಯ್ಕ, ಪಶ್ಚಿಮ ಘಟ್ಟ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಪ್ರತಿಯೊಬ್ಬರು ಪರಿಸರ ಸಂರಕ್ಷಣೆಯಲ್ಲಿ ತೊಡಗಬೇಕು. ಕಾಡಿನ ರಕ್ಷಣೆಯಲ್ಲಿ ಎಲ್ಲರೂ ತೊಡಗಿಸಿಕೊಂಡು ಜೀವಸಂಕುಲ ಉಳಿಸಬೇಕಿದೆ ಎಂದರು.

ಕಾರ್ಕಳ ರೋಟರಿ ಕ್ಲಬ್ ಅಧ್ಯಕ್ಷ ಚಂದ್ರಶೇಖರ್ ಹೆಗ್ಡೆ ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ಪರಿಸರ ಕರಪತ್ರ ಬಿಡುಗ ಡೆಗೊಳಿಸಿದರು. ರಾಜ್ಯ ವಿಜ್ಞಾನ ಪರಿಷತ್‌ನ ಉಡುಪಿ ಜಿಲ್ಲಾ ಸಮಿತಿ ಅಧ್ಯಕ್ಷ ಯು.ಆರ್ ಮಧ್ಯಸ್ಥ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯ ವಿಜ್ಞ್ಞಾನ ಪರಿಷತ್‌ನ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಅಧ್ಯಕ್ಷ ಸುಭಾಷ್ ರೈ, ಹೆಬ್ರಿ ಗ್ರಾಪಂ ಅಧ್ಯಕ್ಷ ಸುಧಾಕರ ಹೆಗ್ಡೆ, ಜೇಸಿಐ ಹೆಬ್ರಿ ಅಧ್ಯಕ್ಷ ಪ್ರಸಾದ ಶೆಟ್ಟಿ, ಕಾರ್ಯಕ್ರಮ ಸಂಯೋಜಕ ದಿನೇಶ ಶೆಟ್ಟಿಗಾರ್, ಕಾಲೇಜಿನ ಉಪಪ್ರಾಂಶುಪಾಲ ಎಸ್.ದಿವಾಕರ ಮರಕಾಲ ಎಸ್, ಹೆಬ್ರಿ ಜೇಸಿರೇಟ್ ಅಧ್ಯಕ್ಷೆ ಸುನೀತಾ ಎ ಹೆಗ್ಡೆ, ನಾಗೇಶ ಅರಳಕುಪ್ಪೆ ಮುಂತಾದವರೊಂದಿಗೆ ಶಾಲಾ ವಿದ್ಯಾರ್ಥಿಗಳು, ರೋಟರಿ ಸಂಸ್ಥೆ ಸದಸ್ಯರು ಹಾಗೂ ಪರಿಸರಾಸಕ್ತರು ಜಾಥಾ ದಲ್ಲಿ ಪಾಲ್ಗೊಂಡಿದ್ದರು. ಪರಿಸರ ಪ್ರೇಮಿ ಟಿ.ಜಿ.ಪ್ರೇಮ್‌ಕುಮಾರ್, ಪಶ್ಚಿಮ ಘಟ್ಟ ಸಂರಕ್ಷಣೆ ಜೊತೆಗೆ ನೆಲ, ಜಲ ಮತ್ತು ಪರಿಸರ ರಕ್ಷಣೆ ಮಾಡುತ್ತೇವೆ. ಪ್ರಕೃತಿಗೆ ಯಾವುದೇ ರೀತಿ ಯಲ್ಲಿ ಧಕ್ಕೆಯನ್ನುಂಟುಮಾಡುವುದಿಲ್ಲ ಎಂದು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News