ಇಂದು ಸಚಿವ ಚಿಂಚನಸೂರ್ ಉಡುಪಿಗೆ

Update: 2016-05-03 19:09 GMT

ಉಡುಪಿ, ಮೇ 3: ಜವಳಿ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಬಾಬುರಾವ್ ಚಿಂಚನಸೂರ್ ಮೇ 4ರಂದು ಉಡುಪಿ ಜಿಲ್ಲೆ ಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಬೆಳಗ್ಗೆ 10 ಗಂಟೆಗೆ ಉಪ್ಪುಂದ ಗ್ರಾಪಂ ಮೈದಾನದಲ್ಲಿ ನಡೆಯುವ ಕುಂದಾಪುರ ತಾಲೂಕಿನ ಬೈಂದೂರು ವಲಯ ನಾಡದೋಣಿ ಮೀನು ಗಾರರ ಸಂಘದ ವತಿಯಿಂದ ನಿರ್ಮಿಸಿರುವ ನಾಡದೋಣಿ ಭವನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News