ಉತ್ತರಾಖಂಡ ಮುಖ್ಯ ನ್ಯಾಯಾಧೀಶ ನ್ಯಾ. ಕೆ ಎಂ ಜೋಸೆಫ್ ಆಂಧ್ರಕ್ಕೆ ವರ್ಗಾವಣೆ

Update: 2016-05-04 06:11 GMT

ಹೊಸದಿಲ್ಲಿ , ಮೇ.4: ಉತ್ತರಾಖಂಡ ಹೈ ಕೋರ್ಟ್ ನ ಮುಖ್ಯ ನ್ಯಾಯಾಧೀಶ ನ್ಯಾ. ಕೆ ಎಂ ಜೋಸೆಫ್ ಅವರನ್ನು ಆಂಧ್ರ ಪ್ರದೇಶ ಹೈಕೋರ್ಟ್ ಗೆ ವರ್ಗಾವಣೆ ಮಾಡಲಾಗಿದೆ.

ಇತ್ತೀಚಿಗೆ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತವನ್ನು ರದ್ದು ಗೊಳಿಸಿ ಆದೇಶ ನೀಡಿದ ಮೇಲೆ ನ್ಯಾ. ಜೋಸೆಫ್ ಸುದ್ದಿಯಲ್ಲಿದ್ದರು. ಆಂಧ್ರ ಪ್ರದೇಶ ಹೈಕೋರ್ಟ್ ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ದಿಲೀಪ್ ಬಿ ಭೊಸಲೆ ಅವರನ್ನು ಮಧ್ಯ ಪ್ರದೇಶದ ಮುಖ್ಯ ನ್ಯಾಯಾಧೀಶರಾಗಿ ಹಾಗು ಮಧ್ಯ ಪ್ರದೇಶದ ಮುಖ್ಯ ನ್ಯಾಯಾಧೀಶ ಅಜಯ್ ಮಾಣಿಕ್ ರಾವ್ ಅವರಿಗೆ ಸುಪ್ರೀಂ ಕೋರ್ಟ್ ಗೆ ಬಡ್ತಿ ನೀಡುವ ಸಾಧ್ಯತೆ ಇದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News