ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

Update: 2016-05-05 17:50 GMT

ಉಪ್ಪಿನಂಗಡಿ, ಮೇ 5: 34ನೆ ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕ ಉತ್ಸವದ ಹಿನ್ನೆಲೆಯಲ್ಲಿ ಗುರುವಾರ ದೇವಸ್ಥಾನದಲ್ಲಿ ಹೊರೆಕಾಣಿಕೆ ಸಮರ್ಪಣೆ ನಡೆಯಿತು.

34ನೆ ನೆಕ್ಕಿಲಾಡಿ, ಕೋಡಿಂಬಾಡಿ, ಬೆಳ್ಳಿಪ್ಪಾಡಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಭಕ್ತರು ಹೊರೆ ಕಾಣಿಕೆಯೊಂದಿಗೆ ಶಾಂತಿನಗರದ ಶ್ರೀ ಸತ್ಯನಾರಾಯಣ ಪೂಜಾ ಮೈದಾನಕ್ಕೆ ಬಂದು ಅಲ್ಲಿಂದ ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ತೆರಳಿ ಶ್ರೀ ದೇವರಿಗೆ ಹೊರೆಕಾಣಿಕೆ ಸಮರ್ಪಿಸಿದರು.

ಹೊರೆಕಾಣಿಕೆ ಮೆರವಣಿಗೆಗೆ ದೇವಾಲಯದ ಮೊಕ್ತೇಸರ ಪುರುಷೋತ್ತಮ ಹನಂಗೂರು ಚಾಲನೆ ನೀಡಿದರು.

ದೇವಸ್ಥಾನದ ಆಡಳಿತ ಮೊಕ್ತೇಸರ ಯು.ಜಿ.ರಾಧ, ಮೊಕ್ತೇಸರ ಗಣಪತಿ ಭಟ್ ಪರನೀರು, ರಾಜೀವ ರೈ ಅಲಿಮಾರ್, ರಾಜೇಶ್ ಶಾಂತಿನಗರ, ರಮೇಶ್ ಗೌಡ ಬೇರಿಕೆ, ದಿವಾಕರ ಶೆಟ್ಟಿ ಕಾರ್ನೋಜಿ, ನೆಕ್ಕಿಲಾಡಿ ನಮ್ಮೂರು- ನಮ್ಮವರು ಸಂಘಟನೆಯ ಅಧ್ಯಕ್ಷ ಜತೀಂದ್ರ ಶೆಟ್ಟಿ, ಸುಧೀರ್ ನೆಕ್ಕಿಲಾಡಿ, ವಿಜಯಕುಮಾರ್ ನೆಕ್ಕಿಲಾಡಿ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News