×
Ad

ಪಾಸ್‌ಪೋರ್ಟ್ ಸೇವಾ ಸೌಲಭ್ಯಕ್ಕೆ ಚಾಲನೆ

Update: 2016-05-07 22:05 IST

ಮಡಿಕೇರಿ, ಮೇ 7: ಪಾಸ್‌ಪೋರ್ಟ್ ಸೇವಾ ಸೌಲಭ್ಯಕ್ಕೆ ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಶನಿವಾರ ಚಾಲನೆ ನೀಡಿದರು.

 ನಗರದ ಕೋಟೆ ಹಳೆ ವಿಧಾನ ಸಭಾಂಗಣದಲ್ಲಿ ಎರಡು ದಿನಗಳ ಕಾಲ ಏರ್ಪಡಿಸಿರುವ ಪಾಸ್‌ಪೋರ್ಟ್ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹಿಂದೆ ಪಾಸ್‌ಪೋರ್ಟ್ ಪಡೆಯಲು ಮಂಗಳೂರು, ಬೆಂಗಳೂರಿಗೆ ತೆರಳಬೇಕಾಗಿತ್ತು. ಆದರೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವರಾದ ಸುಷ್ಮಾಸ್ವರಾಜ್ ಅವರ ಪ್ರಯತ್ನದಿಂದ ಜಿಲ್ಲಾ ಕೇಂದ್ರಗಳಲ್ಲಿ ಪಾಸ್‌ಪೋರ್ಟ್ ಸೇವಾ ಸೌಲಭ್ಯ ಆರಂಭಿಸಲು ಚಿಂತನೆ ಮಾಡಲಾಗಿದೆ. ಆ ನಿಟ್ಟಿನಲ್ಲಿ ಕೊಡಗು ಜಿಲ್ಲಾ ಕೇಂದ್ರದಲ್ಲಿ ಎರಡು ದಿನಗಳ ಕಾಲ ಪಾಸ್‌ಪೋರ್ಟ್ ಸೇವಾ ಸೌಲಭ್ಯವನ್ನು ಕಲ್ಪಿಸಲಾಗಿದ್ದು, ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಶಾಸಕರು ಮನವಿ ಮಾಡಿದರು. ಪಾಸ್‌ಪೋರ್ಟ್ ಪಡೆಯ ಬೇಕಾದವರು ಜನನ ಪ್ರಮಾಣ ಪತ್ರ, ವಾಸಸ್ಥಳ ದೃಢೀಕರಣ ಪತ್ರ ಮತ್ತಿತರರನ್ನು ತರುವಂತಾಗಬೇಕು. 21 ದಿನದಲ್ಲಿ ಪಾಸ್‌ಪೋರ್ಟ್ ಪಡೆಯಲು ಅವಕಾಶವಿದೆ ಎಂದು ಅವರು ಹೇಳಿದರು. ರಾಜ್ಯದ ಪ್ರಾದೇಶಿಕ ಪಾಸ್‌ಪೋರ್ಟ್ ಅಧಿಕಾರಿ ಕಾರ್ತಿಕೇಯನ್ ಮಾತನಾಡಿ, ಕೊಡಗು ಮೈಸೂರು, ಹಾಸನ ಜಿಲ್ಲೆಯವರು ಪಾಸ್‌ಪೋರ್ಟ್ ಪಡೆಯಲು ಅವಕಾಶ ಮಾಡಲಾಗಿದೆ. ಪೊಲೀಸ್ ಇಲಾಖೆಯವರು ಪಾಸ್‌ಪೋರ್ಟ್ ಸಂಬಂಧಿಸಿದಂತೆ ಆದಷ್ಟು ತ್ವರಿತಗತಿಯಲ್ಲಿ ವಿಚಾರಣೆ ಮಾಡಿ ವರದಿ ಕಳುಹಿಸಿಕೊಡಬೇಕು ಎಂದು ತಿಳಿಸಿದರು.

ರಾಜ್ಯದಲ್ಲಿ 6.20 ಲಕ್ಷ ಮಂದಿಗೆ ಪಾಸ್‌ಪೊರ್ಟ್ ವಿತರಿಸಲಾಗಿದೆ. ಜಿಲ್ಲೆಯಲ್ಲಿ ಸುಮಾರು 225 ಪಾಸ್‌ಪೊರ್ಟ್ ನೋಂದಣಿಗೆ ಅರ್ಜಿ ಸಲ್ಲಿಕೆಯಾಗಿದ್ದು, 190 ಅರ್ಜಿಗಳು ಸ್ವೀಕೃತವಾಗಿವೆ ಎಂದು ಕಾರ್ತಿಕೇಯನ್ ಹೇಳಿದರು.

ಕಾರ್ಯಕ್ರಮದಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಾರುಲತಾ ಸೋಮಲ್, ಸಂಸದರ ಆಪ್ತ ಸಹಾಯಕರಾದ ಪ್ರದೀಪ್ ಉತ್ತಯ್ಯ, ಎನ್.ಐ.ಸಿಯ ಅಧಿಕಾರಿ ಅಜಿತ್, ಪಾಸ್‌ಪೋರ್ಟ್ ಸೇವಾ ಕೇಂದ್ರದ ಬಾಲಾಜಿ, ಪ್ರಕಾಶ್ ಮತ್ತಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News