ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಜೀವ ಬೆದರಿಕೆ
Update: 2016-05-09 17:38 IST
ಹೊಸದಿಲ್ಲಿ, ಮೇ 9: ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಜೀವ ಬೆದರಿಕೆಯ ಪತ್ರ ಬಂದಿದ್ದು, ರಾಹುಲ್ ಅವರಿಗೆ ಭಧ್ರತೆಯನ್ನು ಹೆಚ್ಚಿಸುವಂತೆ ಕಾಂಗ್ರೆಸ್ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಮಾಡಿದೆ.
ರಾಹುಲ್ ಗಾಂಧಿ ಮಂಗಳವಾರ ಕಾರೈಕಲ್ನಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ರಾಹುಲ್ ಗಾಂಧಿ ಭಾಗವಹಿಸಿದರೆ ಬಾಂಬ್ ಸ್ಫೋಟಿಸಿ ಕೊಲ್ಲುವುದಾಗಿ ಪತ್ರವೊಂದು ಪುದುಚೇರಿ ಕಾಂಗ್ರೆಸ್ ಕಚೇರಿಗೆ ಬಂದಿದೆ.ಪಾಂಡಿಚೇರಿಯಲ್ಲಿ ಕೈಗಾರಿಕೆಗಳು ಮುಚ್ಚಲು ಕಾಂಗ್ರೆಸ್ ಕಾರಣವೆಂದು ಈ ಪತ್ರದಲ್ಲಿ ಆರೋಪಿಸಲಾಗಿದೆ. ಈ ಪತ್ರವನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ನ ನಾಯಕರಾದ ಆನಂದ ಶರ್ಮ, ಅಹ್ಮದ್ ಪಟೇಲ್ ಮತ್ತಿತರರು ಕೇಂದ್ರ ಗೃಹ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಕೇಂದ್ರ ಸರಕಾರ ರಾಹುಲ್ಗೆ ಭದ್ರತೆಯನ್ನು ಹೆಚ್ಚಿಸುವ ಭರವಸೆ ನೀಡಿದೆ ಕಾಂಗ್ರೆಸ್ ಮೂಲಗಳು ತಿಳಿಸಿವೆ.