ಕೃಷ್ಣಮೃಗದ ಚರ್ಮ ಮಾರಾಟಕ್ಕೆ ಯತ್ನ: ಓರ್ವನ ಬಂಧನ

Update: 2016-05-13 13:04 GMT

ಬೆಳ್ತಂಗಡಿ, ಮೇ 13: ಧರ್ಮಸ್ಥಳದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಕೃಷ್ಣಮೃಗ ಚರ್ಮ ಮಾರಾಟಕ್ಕೆ ಯತ್ನಿಸಿದ ಆರೋಪಿಯೋರ್ವನನ್ನು ಪುತ್ತೂರು ಅರಣ್ಯ ಸಂಚಾರಿ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಗದಗ ಡೊಕ್ಕಬಳ್ಳಿಯ ನಿವಾಸಿ ನಾಗಪ್ಪ ಯಾನೆ ನಾಗರಾಜ ಎಂದು ಗುರುತಿಸಲಾಗಿದೆ.

ಆರೋಪಿಯಿಂದ ಮಾರಾಟ ಮಾಡಲು ತಂದಿದ್ದ ಕೃಷ್ಣಮೃಗದ ಚರ್ಮವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ಪೊಲೀಸರು ಧರ್ಮಸ್ಥಳ ಠಾಣೆಗೆ ಹಸ್ತಾಂತರಿಸಿದ್ದು, ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News