ಪ್ರೊ.ಕೆ.ಚಿನ್ನಪ್ಪಗೌಡರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ

Update: 2016-05-20 17:59 GMT

ಕೊಣಾಜೆ, ಮೇ 20: ಶಿಕ್ಷಣ ಮತ್ತು ಸಂಶೋಧನೆ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಾವೇರಿಯ ಜಾನಪದ ವಿವಿಯ ಕುಲಪತಿ ಪ್ರೊ.ಕೆ.ಚಿನ್ನಪ್ಪಗೌಡರಿಗೆ ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ ಗೌರವಿಸಿತು.

ಸಮಾರಂಭದಲ್ಲಿ ಕರ್ನಾಟಕ ಉಚ್ಚನ್ಯಾಯಾಲಯದ ನ್ಯಾಯಮೂರ್ತಿ ಎನ್.ಕುಮಾರ್, ದೂರದರ್ಶನ ಕೇಂದ್ರ ದೆಹಲಿ, ದಕ್ಷಿಣ ವಲಯದ ಹೆಚ್ಚುವರಿ ಮಹಾನಿರ್ದೇಶಕ ನಾಡೋಜ ಡಾ.ಮಹೇಶ್ ಜೋಶಿ, ವಿಶ್ವವಾಣಿ ಪತ್ರಿಕೆಯ ಮುಖ್ಯ ಸಂಪಾದಕ ವಿಶ್ವೇಶ್ವರ ಭಟ್, ಆರ್ಯಭಟ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ.ಎಚ್.ಎನ್.ಎಲ್.ರಾವ್ ಮುಂತಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News