ಎಕ್ಕೂರು ಬಳಿ ಡಿಸಿಪಿ ಕಾರು ಅಪಘಾತ
Update: 2016-05-23 04:28 GMT
ಮಂಗಳೂರು, ಮೇ 23; ನಗರದ ಎಕ್ಕೂರು ಬಳಿ ಮಂಗಳೂರಿನಿಂದ ಉಳ್ಳಾಲಕ್ಕೆ ತೆರಳುತ್ತಿದ್ದ ಮಂಗಳೂರು ನಗರ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಕೆ.ಎಂ. ಶಾಂತರಾಜು ಅವರ ಕಾರಿಗೆ ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರು ರಾತ್ರಿ 12 ಗಂಟೆಯ ಸುಮಾರಿಗೆ ಢಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಡಿಸಿಪಿ ಕೆ.ಎಂ. ಶಾಂತರಾಜು ಅವರಿಗೆ ಸಣ್ಣ ಪುಟ್ಟ ಗಾಯವಾಗಿದೆ. ತೊಕ್ಕೊಟ್ಟು ವಿನಿಂದ ಬರುತ್ತಿದ್ದ ಕಾರಿನ ಚಾಲಕನಿಗೂ ಸಣ್ಣ ಪುಟ್ಟ ಗಾಯವಾಗಿದೆ.
ಮಂಗಳೂರು ಪೂರ್ವ ಸಂಚಾರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.