ನಾಳೆ ಸುಮ ಸೌರಭ ಪತ್ರಿಕೆಯ 24ನೆ ವಾರ್ಷಿಕೋತ್ಸವ

Update: 2016-05-23 18:50 GMT

ಮಂಗಳೂರು, ಮೇ 23: ಸುಮ ಸೌರಭ ಸಾಹಿತ್ಯ ಪಾಕ್ಷಿಕ ಪತ್ರಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಮೇ 25ರಂದು ಬೆಳಗ್ಗೆ 10ರಿಂದ ರಾತ್ರಿ 9ರವರೆಗೆ ಶ್ರೀ ಮಂಗಳಾದೇವಿ ಕಲಾ ಮಂಟಪದಲ್ಲಿ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಮ್ಮೇಳನ ಹಾಗೂ ಸೌರಭ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ಪತ್ರಿಕೆಯ ಸಂಪಾದಕ ಎಂ.ಜೆ.ರಾವ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಸಮ್ಮೇಳನದ ಅಧ್ಯಕ್ಷತೆಯನ್ನು ಸಾಹಿತಿ ಹಾಗೂ ರಂಗಕಲಾವಿದ ಪ್ರಭಾ ಎನ್.ಸುವರ್ಣ ವಹಿಸಲಿದ್ದಾರೆ. ಮಾಜಿ ಶಾಸಕ ಚಂದ್ರಕಾಂತ ಗುರಪ್ಪ ಬೆಲ್ಲದ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ವಿದುಷಿ ನಾಗರತ್ನಾ ಎನ್. ಹಡಗಲಿಗೆ ‘ಕನ್ನಡರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಹೇಳಿದರು.ಾರ್ಯಕ್ರಮದಲ್ಲಿ ಮೂರು ಗೋಷ್ಠಿಗಳನ್ನು ಹಮ್ಮಿಕೊಳ್ಳಲಾಗಿದೆ. ಸಂಜೆ ನಡೆಯುವ ಸಮ್ಮೇಳನದ ಸಮಾರೋಪದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ‘ಸೌರಭ ರತ್ನ’ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಅಲ್ಲದೆ ಸೌರಭ ಯುವ ಪ್ರಶಸ್ತಿ ಪುರಸ್ಕಾರ ಮತ್ತು ಸೌರಭ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದೆ ಎಂದು ಎಂ.ಜೆ.ರಾವ್ ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಸದಾಶಿವ ಹೆಗ್ಡೆ, ಕೇಶವ ಹೆಗ್ಡೆ, ಮಾ.ಸುಮಂತ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News