ಠಾಣೆಯಿಂದ ಪರಾರಿಯಾದ ಆರೋಪಿಯನ್ನು ಬೆನ್ನಟ್ಟಿ ಹಿಡಿದ ಪೊಲೀಸರು

Update: 2016-05-26 12:28 GMT

ಕಾಸರಗೋಡು, ಮೇ 26: ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಪರಾರಿಯಾಗಲೆತ್ನಿಸಿದ ವಾರಂಟ್ ಆರೋಪಿಯೋರ್ವನನ್ನು ಬೆನ್ನಟ್ಟಿ ಹಿಡಿಯುವಲ್ಲಿ ವಿದ್ಯಾನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.

ಉಳಿಯತ್ತಡ್ಕ ನ್ಯಾಶನಲ್ ನಗರದ ಫೈಜಲ್ (19) ಪರಾರಿಯಾಗಲೆತ್ನಿಸಿದ ಆರೋಪಿ.

ಉಳಿಯತ್ತಡ್ಕ ನ್ಯಾಶನಲ್ ನಗರದ ವಸತಿಗೃಹವೊಂದರ ಬಳಿ ಸಿದ್ದಿಕ್ ಎಂಬವರ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಆರೋಪಿಯಾದ ಈತನನ್ನು ಇಂದು ಬೆಳಗ್ಗೆ ಪೊಲೀಸರು ಬಂಧಿಸಿದ್ದರು.

ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ವಿದ್ಯಾನಗರ ಠಾಣೆಗೆ ಕರೆತಂದಿದ್ದರು. ಈ ಸಂದರ್ಭ ಈತ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಲೆತ್ನಿಸಿದ್ದು, ಪೊಲೀಸರು ಬೆನ್ನಟ್ಟಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News